ಬೇಲೂರು(ಹಾಸನ): 45ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಕೆಎಸ್ಆರ್ಟಿಸಿ ಬಸ್ ಒಂದು ಮಂಗಳವಾರ ಬೆಳಿಗ್ಗೆ ಬೇಲೂರು ಸಮೀಪದ ವಿಷ್ಣುಸಮುದ್ರ ಕೆರೆಗೆ ಉರುಳಿದ್ದು, ಈವರೆಗೆ 15 ಮಂದಿಯ ಶವಗಳನ್ನು ಹೊರ ತೆಗೆಯಲಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಬಸ್ ಸಕಲೇಶಪುರದಿಂದ ಬೇಲೂರಿಗೆ ತೆರಳುತ್ತಿದ್ದಾಗ ಬೆಳಿಗ್ಗೆ 10ಕ್ಕೆ ಅವಘಡ ಸಂಭವಿಸಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ವಿಜಾಪುರ ಜಿಲ್ಲೆಯ ಚಿಕ್ಕ ಸಿಂದಗಿ ಬಳಿ ಸೋಮವಾರ ಕ್ರೂಸರ್-ಬಸ್ ಡಿಕ್ಕಿ ಸಂಭವಿಸಿ 18 ಮಂದಿ ದಾರುಣ ಸಾವು ಕಂಡ ಬೆನ್ನಲ್ಲೇ ಮತ್ತೊಂದು ದುರಂತ ಜರುಗಿದೆ.