ಬೆಂಗಳೂರು: ‘ನಟ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ವಿವಾದರಹಿತ ಐದು ಎಕರೆ ಜಮೀನನ್ನು ಮಂಜೂರು ಮಾಡಬೇಕು’ ಎಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
‘ನನ್ನ ಕ್ಷೇತ್ರದ ಮೈಲಸಂದ್ರ ಗ್ರಾಮದ ಬಳಿ ಸ್ಮಾರಕ ನಿರ್ಮಾಣಕ್ಕೆ ಮಂಜೂರು ಮಾಡಿರುವ ಎರಡು ಎಕರೆ ಜಾಗವನ್ನು ನೀಡದಂತೆ ಹೈಕೋರ್ಟ್ ಆದೇಶಿಸಿದೆ. ಇದರಿಂದಾಗಿ ಲಕ್ಷಾಂತರ ವಿಷ್ಣು ಅಭಿಮಾನಿಗಳಿಗೆ ಬೇಸರವಾಗಿದೆ. ಸರ್ಕಾರ ತಕ್ಷಣ ವಿಷ್ಣುವರ್ಧನ್ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಅವರೊಂದಿಗೆ ಚರ್ಚೆ ನಡೆಸಿ ಸ್ಮಾರಕ ನಿರ್ಮಾಣಕ್ಕೆ ಮುಂದಾಗಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.