ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ್ಣು ಸ್ಮಾರಕ ಕಾಮಗಾರಿ ಆರಂಭವಾಗಲಿ

Last Updated 24 ಮೇ 2016, 10:24 IST
ಅಕ್ಷರ ಗಾತ್ರ

ಕನ್ನಡ ಸಿನಿಮಾ ರಂಗದ ಪ್ರತಿಭಾವಂತ ಕಲಾವಿದರಾದ ಡಾ. ವಿಷ್ಣುವರ್ಧನ್‌ ನಿಧನರಾಗಿ, 7 ವರ್ಷ ಕಳೆದರೂ ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಗೊಂಡಿಲ್ಲ. ಸ್ಮಾರಕ ನಿರ್ಮಾಣಕ್ಕೆ ಒತ್ತಾಯಿಸಿ ಮೇ 14 ರಂದು ಬೆಂಗಳೂರಿನಲ್ಲಿ ಅಭಿಮಾನಿಗಳು ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು.

ವಿಷ್ಣುವರ್ಧನ್ ಸ್ಮಾರಕ ಸ್ಥಳಾಂತರದ ಸುದ್ದಿಯು ಅಭಿಮಾನಿಗಳಲ್ಲಿ ವಿಸ್ಮಯ, ಬೇಸರ, ಮೂಡಿಸಿದೆ. ಸಚಿವರಾದ ಅಂಬರೀಷ್‌, ಉಮಾಶ್ರೀ,  ಇನ್ನೂ ಏಕೆ ಜಾಣ ಕಿವುಡು ಮೆರೆಯುತ್ತಿದ್ದಾರೆ. ಅಭಿಮಾನಿ ದೇವರುಗಳ ಮನಸ್ಸಿನ ಭಾವನೆಗಳನ್ನು ಗೌರವಿಸಿ ನೈಜ ಕಾಳಜಿ, ಅಭಿಮಾನದಿಂದ ತಕ್ಷಣವೇ ವಿಷ್ಣು ಸ್ಮಾರಕ ಕಾಮಗಾರಿ ಆರಂಭಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT