ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೆಚ್ಚ ಭರಿಸಲು ಸಿದ್ಧ: ಸರ್ಕಾರ

Last Updated 15 ಸೆಪ್ಟೆಂಬರ್ 2014, 20:11 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಸಂಜಯ್‌ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ತುತ್ತಾದ ಮೂರು ವರ್ಷದ ಮಗು ಮರಿಯಂ ಕೌಸರ್‌ಳ ಚಿಕಿತ್ಸಾ ವೆಚ್ಚ ಭರಿಸಲು ಸಿದ್ಧ ಎಂದು ಸರ್ಕಾರ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ.

ಲತಾ ರಾವ್‌ ಎಂಬುವವರು ಸಲ್ಲಿಸಿ­ರುವ ಅರ್ಜಿ ವಿಚಾರಣೆ ವೇಳೆ, ‘ವೆಚ್ಚ ಭರಿಸಲು ಸಿದ್ಧ. ಆದರೆ ಇದಕ್ಕೆ ಸಂಬಂಧಿಸಿದಂತೆ ಬಾಲಕಿಯ ಪೋಷಕ­ರಿಂದ ಮನವಿ ಬರಬೇಕು’ ಎಂದು ಸರ್ಕಾರಿ ವಕೀಲರು ತಿಳಿಸಿದರು.

ಮಗುವಿಗೆ ಚಿಕಿತ್ಸೆ ನೀಡುವ ಸಂದರ್ಭ­ದಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯರನ್ನು ಆಸ್ಪತ್ರೆ ಅಮಾನತಿನಲ್ಲಿ ಇರಿಸಿದೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬದಲು ಸಾಮಾನ್ಯ  ಅರ್ಜಿಯಾಗಿ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್‌. ವಘೇಲಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT