ಬೆಂಗಳೂರು: ನಗರದ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯಕ್ಕೆ ತುತ್ತಾದ ಮೂರು ವರ್ಷದ ಮಗು ಮರಿಯಂ ಕೌಸರ್ಳ ಚಿಕಿತ್ಸಾ ವೆಚ್ಚ ಭರಿಸಲು ಸಿದ್ಧ ಎಂದು ಸರ್ಕಾರ ಹೈಕೋರ್ಟ್ಗೆ ಸೋಮವಾರ ತಿಳಿಸಿದೆ.
ಲತಾ ರಾವ್ ಎಂಬುವವರು ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ, ‘ವೆಚ್ಚ ಭರಿಸಲು ಸಿದ್ಧ. ಆದರೆ ಇದಕ್ಕೆ ಸಂಬಂಧಿಸಿದಂತೆ ಬಾಲಕಿಯ ಪೋಷಕರಿಂದ ಮನವಿ ಬರಬೇಕು’ ಎಂದು ಸರ್ಕಾರಿ ವಕೀಲರು ತಿಳಿಸಿದರು.
ಮಗುವಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ ವೈದ್ಯರನ್ನು ಆಸ್ಪತ್ರೆ ಅಮಾನತಿನಲ್ಲಿ ಇರಿಸಿದೆ ಎಂದು ವಕೀಲರು ನ್ಯಾಯಪೀಠಕ್ಕೆ ತಿಳಿಸಿದರು. ಈ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬದಲು ಸಾಮಾನ್ಯ ಅರ್ಜಿಯಾಗಿ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿ ಎಂದು ಮುಖ್ಯ ನ್ಯಾಯಮೂರ್ತಿ ಡಿ.ಎಚ್. ವಘೇಲಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.