ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಸ್ತ್ರ ಚಿಕಿತ್ಸೆಗೆ ಒಳಗಾದ ಸಚಿವ ಜೇಟ್ಲಿ

Last Updated 2 ಸೆಪ್ಟೆಂಬರ್ 2014, 9:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಇಲ್ಲಿನ ಆಸ್ಪತ್ರೆಯೊಂದರಲ್ಲಿ ಮಂಗಳವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ.

‘ಮಧುಮೇಹ ನಿರ್ವಹಣೆ ನಿಟ್ಟಿನಲ್ಲಿ ಅರುಣ್‌ ಜೇಟ್ಲಿ ಅವರು ನಿಗದಿಯಂತೆ ಮಂಗಳವಾರ 'ಲ್ಯಾಪ್ರೋಸ್ಕೋಪಿಕ್' ಚಿಕಿತ್ಸೆಗೆ ಒಳಗಾಗಿದ್ದಾರೆ. ಸಾಕೆತ್‌ನಲ್ಲಿರುವ 'ಮಾಕ್ಸ್ ಸೂಪರ್ ಸ್ಪೆಷಾಲಿಟಿ' ಆಸ್ಪತ್ರೆಯಲ್ಲಿ ಪ್ರದೀಪ್‌ ಕೆ. ಚೌಧರಿ ಅವರು ಶಸ್ತ್ರ ಚಿಕಿತ್ಸೆ ನಡೆಸಿದ್ದು, ಯಶಸ್ವಿಯಾಗಿದೆ’ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ಶಸ್ತ್ರ ಚಿಕಿತ್ಸೆಗಾಗಿ ಸೋಮವಾರ ಸಂಜೆಯಷ್ಟೇ ಜೇಟ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. 61 ವರ್ಷದ ಬಿಜೆಪಿಯ ಹಿರಿಯ ನಾಯಕ ಜೇಟ್ಲಿ ಅವರು ಕೆಲ ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT