ರೈತರ ಆತ್ಮಹತ್ಯೆ ಪ್ರಕರಣಗಳಿಂದ ಹೆಚ್ಚಾಗಿ ಸುದ್ದಿಯಲ್ಲಿರುವ ಮಹಾರಾಷ್ಟ್ರದ ವಿದರ್ಭ ಅಥವಾ ತೆಲಂಗಾಣದ ಮೆದಕ್ ಜಿಲ್ಲೆಯಿಂದ ಪಾದಯಾತ್ರೆ ಕೈಗೊಳ್ಳಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಾದಯಾತ್ರೆಯ ಭಾಗವಾಗಿ ಉತ್ತರಪ್ರದೇಶ, ಆಂಧ್ರಪ್ರದೇಶ, ರಾಜಸ್ತಾನ್, ಮಧ್ಯಪ್ರದೇಶ, ಪಂಜಾಬ್ ಹಾಗೂ ತೆಲಂಗಾಣಕ್ಕೆ ಭೇಟಿ ನೀಡಲಿರುವ ರಾಹುಲ್, ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.
ಪಾದಯಾತ್ರೆಗೆ ಸಂಬಂಧಿಸಿದ ರಾಹುಲ್ ಅವರ ಕಾರ್ಯಕ್ರಮಗಳ ಪಟ್ಟಿಯನ್ನು ಇನ್ನೇನು ಅಂತಿಮಗೊಳಿಸಬೇಕಿದೆ ಎಂದು ಎಐಸಿಸಿಯ ಮಾಧ್ಯಮ ವಿಭಾಗದ ಮೇಲ್ವಿಚಾರಕ ರಣ್ದೀಪ್ ಸರ್ಜಿವಾಲಾ ತಿಳಿಸಿದ್ದಾರೆ.