ನವದೆಹಲಿ (ಪಿಟಿಐ): ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣ ಗುರುತಿಸುವ ಎ.ಕೆ. ಆಂಟನಿ ನೇತೃತ್ವದ ಗುಂಪು ಜುಲೈ 6ರಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ವರದಿ ಸಲ್ಲಿಸಿದ ಬಳಿಕ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪುನರ್ರಚನೆಯಾಗುವ ಸಾಧ್ಯತೆ ಇದೆ.
ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿ ಕೇವಲ 44 ಸ್ಥಾನಗಳನ್ನು ಪಡೆದ ಹೀನಾಯ ಸೋಲಿನ ಬಳಿಕ ಎಐಸಿಸಿಯಲ್ಲಿ ಮೊತ್ತ ಮೊದಲ ಪಕ್ಷ ಪುನರ್ಸಂಘಟನೆ ಇದಾಗಲಿದೆ.
ಪಕ್ಷ ಪುನರ್ ಸಂಘಟನೆ ಮೂಲಕ ಹಲವು ಯುವ ಮುಖಗಳು ಎಐಸಿಸಿಯಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ. ಹಾಗೆಯೇ ದಶಕಗಳಿಂದ ಎಐಸಿಸಿಯಲ್ಲಿರುವ ಹಲವರು ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ, ಹರಿಯಾಣ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಪಕ್ಷದ ಮುಖ್ಯಸ್ಥರು ಬದಲಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.