ಬೆಂಗಳೂರು: ‘ಮೆಟ್ರೊ ನಿಲ್ದಾಣಗಳಲ್ಲಿ ಶೌಚಾಲಯ ವ್ಯವಸ್ಥೆ ಇಲ್ಲ. ಇಂತಹ ಯೋಜನೆ ನಮಗೆ ಅಗತ್ಯ ಇಲ್ಲ’ ಎಂದು ಆರೋಪಿಸಿ ಮಾಹಿತಿ ಹಕ್ಕು ಹೋರಾಟಗಾರರು ಪೀಣ್ಯ ಕೈಗಾರಿಕಾ ಪ್ರದೇಶ–ನಾಗಸಂದ್ರ ನಡುವಿನ ಮೆಟ್ರೊ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರ ನಗರಾಭವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾತು ಆರಂಭಿಸುತ್ತಿದ್ದಂತೆ ಪ್ರತಿಭಟನೆ ಆರಂಭಿಸಿದ ಅವರು ಮೆಟ್ರೊ ವಿರುದ್ಧ ಧಿಕ್ಕಾರ ಕೂಗಿದರು.
ಪೊಲೀಸರು ಅವರನ್ನು ವಶಕ್ಕೆ ಪಡೆದು ಬಳಿಕ ಬಿಟ್ಟರು. ‘ಮೆಟ್ರೊ ನಿಲ್ದಾಣಗಳಲ್ಲಿ ಅಗತ್ಯ ಶೌಚಾಲಯಗಳನ್ನು ನಿಗಮ ನಿರ್ಮಾಣ ಮಾಡಬೇಕು’ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.