ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 2014--–15ನೇ ಸಾಲಿನ ಶ್ರೇಷ್ಠ ಲೇಖಕ ಪ್ರಶಸ್ತಿಗೆ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕ -ಪ್ರಕಟಿಸಿದ ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಜನವರಿ, 2014ರಿಂದ ಡಿಸೆಂಬರ್, 2014ರೊಳಗೆ ಮೇಲ್ಕಂಡ ವಿಷಯಗಳಲ್ಲಿ ಕನ್ನಡದಲ್ಲಿ ಪ್ರಕಟಗೊಂಡ ಪುಸ್ತಕಗಳನ್ನು ಈ ಪ್ರಶಸ್ತಿಗೆ ಸಲ್ಲಿಸಬಹುದು. ಪುಸ್ತಕಗಳ ಸಂಖ್ಯಾನುಗುಣವಾಗಿ ಪ್ರತಿ ವಿಷಯಕ್ಕೆ ಗರಿಷ್ಠ 2 ಪ್ರಶಸ್ತಿಯನ್ನು ನೀಡಲಾಗುವುದು. ಆಯ್ಕೆಯಾದ ಲೇಖಕರಿಗೆ ₨ 25 ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಲೇಖಕರು ನಿಗದಿತ ನಮೂನೆಯ ಅರ್ಜಿಯೊಂದಿಗೆ ಪುಸ್ತಕದ ನಾಲ್ಕು ಪ್ರತಿಗಳನ್ನು ಜನವರಿ, 2015ರೊಳಗೆ ಸದಸ್ಯ ಕಾರ್ಯದರ್ಶಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಜ್ಞಾನ ಭವನ, 21ನೇ ಮುಖ್ಯ ರಸ್ತೆ, ಬನಶಂಕರಿ 2ನೇ ಹಂತ, ಬೆಂಗಳೂರು–560 070 ಇಲ್ಲಿಗೆ ಕಳುಹಿಸಬೇಕು. ವಿವರಗಳಿಗೆ ಅಕಾಡೆಮಿಯ ವೆಬ್ಸೈಟ್ ಸಂಪರ್ಕಿಸಲು ಎಂದು ಪ್ರಕಟಣೆ ತಿಳಿಸಿದೆ.