ಬೆಂಗಳೂರು: ಕಾಂಗ್ರೆಸ್ ನಾಯಕಿ ರಮ್ಯಾ ಅವರು ಹೆಬ್ಬಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಹಮಾನ್ ಷರೀಫ್ ಪರವಾಗಿ ಶನಿವಾರ ಮತ ಯಾಚಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ರಾಮಲಿಂಗಾರೆಡ್ಡಿ, ನಟಿ ಭಾವನಾ ಅವರೂ ಜೊತೆಗಿದ್ದರು.
ಹೆಬ್ಬಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮನತ್ ನಗರ, ಜೆ.ಸಿ. ನಗರ, ಗಂಗೇನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇವರು ಪ್ರಚಾರ ನಡೆಸಿದರು. ಭಾವನಾ ಅವರು ಪಕ್ಷದ ಕಾರ್ಯಕರ್ತರೊಬ್ಬರ ಬೈಕ್ ಏರಿ, ಜೆ.ಸಿ. ನಗರ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಿದರು. ಆಕರ್ಷಣೆಯ ಕೇಂದ್ರವಾದರು.
ರಮ್ಯಾ, ಶಿವಕುಮಾರ್ ಮತ್ತು ರಾಮಲಿಂಗಾರೆಡ್ಡಿ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆದ ಜೀಪಿನಲ್ಲಿ ಸುತ್ತಾಟ ನಡೆಸಿ, ‘ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಪರಿಗಣಿಸಿ ಷರೀಫ್ ಪರ ಮತ ಚಲಾಯಿಸಿ’ ಎಂದು ಮತದಾರರನ್ನು ಕೋರಿದರು.