ತಸ್ಲಿಮಾ ವೀಸಾ ಅವಧಿ ವಿಸ್ತರಣೆ
ನವದೆಹಲಿ: ದೇಶಭ್ರಷ್ಟರಾಗಿರುವ ಬಾಂಗ್ಲಾದೇಶದ ವಿವಾದಾತ್ಮಕ ಲೇಖಕಿ ತಸ್ಲಿಮಾ ನಸ್ರೀನ್ ಅವರ ವೀಸಾ ಅವಧಿಯನ್ನು ಸರ್ಕಾರ ವಿಸ್ತರಿಸಿದೆ.
ಹೊಸ ವೀಸಾ ಅವಧಿ ಮುಂದಿನ ಆಗಸ್ಟ್ನಲ್ಲಿ ಮುಗಿಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾ-ರಿಗಳು ತಿಳಿಸಿದ್ದಾರೆ. ಕಳೆದ ತಿಂಗಳಷ್ಟೆ ಗೃಹ ಸಚಿವಾಲಯವು ಅವರಿಗೆ 2 ತಿಂಗಳವರೆಗೆ ತಾತ್ಕಾಲಿಕ ವೀಸಾ ನೀಡಿತ್ತು
ಅವಧಿ ವಿಸ್ತರಣೆ ಕುರಿತಂತೆ ಲೇಖಕಿ ತಸ್ಲಿಮಾ ಆ. 2ರಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು.
ಮುಂಗಡ ಕಾಯ್ದಿರಿಸುವಿಕೆ ಸ್ಥಗಿತ
ಹೈದರಾಬಾದ್: ತಿರುಪತಿಯಲ್ಲಿ ವಾರ್ಷಿಕ ಬ್ರಹ್ಮರಥೋತ್ಸವ ಈ ತಿಂಗಳ 26ರಿಂದ ಅಕ್ಟೋಬರ್ 4 ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ಸೆಪ್ಟೆಂಬರ್ 25ರಿಂದ ವಸತಿ ಸೌಕರ್ಯಗಳ ಮುಂಗಡ ಕಾಯ್ದಿರಿಸುವಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅಮಿತ್ ಷಾ ವಾಗ್ದಾಳಿ
ತಿರುವನಂತಪುರ (ಪಿಟಿಐ): ಕೇರಳದಲ್ಲಿ ಪಕ್ಷದ ನೆಲೆ ಭದ್ರಗೊಳಿಸಲು ಆ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಕಾಂಗ್ರೆಸ್ ಮತ್ತು ಎಡ ಪಕ್ಷಗಳ ಮೇಲೆ ವಾಗ್ದಾಳಿ ನಡೆಸಲು ‘ಕೋಮು ಓಲೈಕೆ’ ವಿಷಯವನ್ನು ಅಸ್ತ್ರವನ್ನಾಗಿಸಿಕೊಂಡರು.
ಮತ ಬ್ಯಾಂಕ್ ರಾಜಕಾರಣ ಮಾಡುವ ಮೂಲಕ ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್, ಯುಡಿಎಫ್ ಮತ್ತು ಸಿಪಿಎಂ ನೇತೃತ್ವದ ಎಲ್ಡಿಎಫ್ ಸರ್ಕಾರಗಳು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿವೆ ಎಂದು ಸೋಮವಾರ ಇಲ್ಲಿ ಆಯೋಜಿಸಲಾಗಿದ್ದ ಪಕ್ಷದ ತಳಮಟ್ಟದ ಕಾರ್ಯಕರ್ತರ ವಿಶೇಷ ಸಮಾವೇಶದಲ್ಲಿ ದೂರಿದರು.
‘ಬೆಂಗಳೂರು ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಪಿಡಿಪಿ ನಾಯಕ ಅಬ್ದುಲ್ ನಾಸೀರ್ ಮದನಿ ಬಿಡುಗಡೆಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಅತ್ಯಾಸಕ್ತಿ ತೋರುತ್ತಿದೆ’ ಎಂದರು.