ಕೇಜ್ರಿವಾಲ್ ಅವರು ಏಕಕಾಲದಲ್ಲಿ ಮುಖ್ಯಮಂತ್ರಿ ಹಾಗೂ ಪಕ್ಷದ ಸಂಚಾಲಕ ಹುದ್ದೆ ನಿಭಾಯಿಸುತ್ತಿರುವುದು, ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಷಯ ಹಾಗೂ ದೆಹಲಿಯ ಹೊರತಾಗಿ ಇತರ ರಾಜ್ಯಗಳಲ್ಲಿ ಎಎಪಿಯ ಪಾತ್ರ ಮತ್ತಿತರ ವಿಷಯಗಳ ಬಗ್ಗೆ ಪಕ್ಷದ ಮುಖಂಡರಲ್ಲಿ ಅಸಮಾಧಾನ ಉಂಟಾಗಿ ಭಿನ್ನಮತಕ್ಕೆ ಕಾರಣವಾಗಿದೆ.