ಬೆಂಗಳೂರು: ಸಂಪುಟ ಪುನರ್ರಚನೆ ಮಾಡಬೇಕು ಎಂದು ಹಲವು ಶಾಸಕರು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಒತ್ತಾಯಿಸಿದ್ದಾರೆ.
ಶಾಸಕ ಆರ್.ವಿ.ದೇವರಾಜ್, ಎ. ಮಂಜು ಸೇರಿದಂತೆ ಹಲವು ಶಾಸಕರು ಕುಮಾರಕೃಪಾ ಅತಿಥಿಗೃಹದಲ್ಲಿ ರಾಹುಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.
ಶಾಸಕರ ಬೇಡಿಕೆಗೆ ಪ್ರತಿಕ್ರಿಯಿಸಿದ ರಾಹುಲ್, ‘ಆದಷ್ಟು ಬೇಗ ಸಂಪುಟ ಪುನರ್ರಚನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡುತ್ತೇನೆ’ ಎಂದರು ಎನ್ನಲಾಗಿದೆ.