ನವದೆಹಲಿ(ಪಿಟಿಐ): ಸೋಮವಾರದಿಂದ ಆರಂಭವಾಗಲಿರುವ ಸಂಸ ತ್ತಿನ ಚಳಿಗಾಲ ಅಧಿವೇಶನ ಸುಗಮವಾಗಿ ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.
ವಿರೋಧಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಲಾಪ ಸಕಾರಾತ್ಮಕ ಮತ್ತು ಅಡೆತಡೆಯಿಲ್ಲದೆ ನಡೆಯುವಂತೆ ನೋಡಿಕೊಳ್ಳಲಾಗುವುದು ಎಂದು ಶನಿವಾರ ನಡೆದ ಕಾರ್ಯಕ್ರಮವೊಂದ ರಲ್ಲಿ ಸುದ್ದಿಗಾರರಿಗೆ ಹೇಳಿದರು.
ಭಾನುವಾರ ಸರ್ವಪಕ್ಷಗಳ ಸಭೆ ಕರೆಯಲಾಗಿದ್ದು ಅಧಿವೇಶನದಲ್ಲಿ ಸುಗಮ ಕಲಾಪ ನಡೆಯುವಂತೆ ಸಹಕರಿಸುವಂತೆ ಮನವಿ ಮಾಡಲಾಗುವುದು ಎಂದೂ ನಖ್ವಿ ತಿಳಿಸಿದರು.
ಟಿಎಂಸಿ ಗೈರು: ಸಂಸತ್ತಿನ ಚಳಿಗಾಲದ ಅಧಿವೇಶನ ಯಾವುದೇ ಅಡೆತಡೆಯಿಲ್ಲದೆ ನಡೆಸಲು ಸಹಕಾರ ನೀಡುವಂತೆ ವಿನಂತಿಸಲು ಸಂಸದೀಯ ವ್ಯವಹಾರ ಸಚಿವ ರಾಜೀವ್ ಪ್ರತಾಪ್ ರೂಡಿ ಅವರು ಭಾನುವಾರ ಕರೆದಿರುವ ಸರ್ವ ಪಕ್ಷಗಳ ಸಭೆಗೆ ತೃಣಮೂಲ ಕಾಂಗ್ರೆಸ್ ಹಾಜರಾಗದಿರಲು ನಿರ್ಧರಿಸಿದೆ.