ಬುಧವಾರ, 10 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ ಕಲಾಪ ಮುಂದೂಡಿಕೆ

Last Updated 24 ನವೆಂಬರ್ 2014, 10:18 IST
ಅಕ್ಷರ ಗಾತ್ರ

ನವದೆಹಲಿ(ಐಎಎನ್ ಎಸ್): ಲೋಕಸಭೆ ಹಾಗೂ ರಾಜ್ಯ ಸಭೆಯ ಚಳಿಗಾಲದ ಅಧಿವೇಶನವನ್ನು ಕಾಂಗ್ರೆಸ್ ನ ಹಿರಿಯ ನಾಯಕ ಕೇಂದ್ರ ಮಾಜಿ ಸಚಿವ ಮುರುಳಿ ದೇವ್ರಾ ಅವರು ಸೋಮವಾರ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆ ಮುಂದೂಡಲಾಯಿತು.

ಇಂದು ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ ಮುರುಳಿ ದೇವ್ರಾ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾದ ಪ್ರವಾಹದಲ್ಲಿ ಮೃತರಾದವರು ಹಾಗೂ ಆಂಧ್ರಪ್ರದೇಶದಲ್ಲಿ ಹುದ್ ಹುದ್ ಚಂಡಮಾರುತಕ್ಕೆ ಬಲಿಯಾದವರ ಗೌರವಾರ್ಥ ಸಂತಾಪ ಸೂಚಿಸಿ ಅಧಿವೇಶನವನ್ನು ಮುಂದೂಡಲಾಯಿತು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟದ ನೂತನ ಸಚಿವರನ್ನು ಸ್ವಾಗತಿಸಿ, ಸದನಕ್ಕೆ ಪರಿಚಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT