ಕಳೆದ ಜೂನ್ 24ರಂದು ಕಿರಣ್ ರಿಜಿಜು ಅವರು ಲೇ ನಿಂದ ದೆಹಲಿಗೆ ತೆರಳಬೇಕಿತ್ತು. ಸಚಿವರ ಪ್ರಯಾಣಕ್ಕೆ ಅನುವು ಮಾಡಿಕೊಡುವ ಸಲುವಾಗಿ ಒಂದು ಮಗು ಸೇರಿದಂತೆ ಮೂವರು ಪ್ರಯಾಣಿಕರನ್ನು ಕೆಳಗಿಳಿಸಿರುವ ಏರ್ ಇಂಡಿಯಾದ ಕ್ರಮವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಖಂಡಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು ಏರ್ಇಂಡಿಯಾ ಅಧಿಕಾರಿಗಳು ಮೂವರು ಪ್ರಯಾಣಿಕರನ್ನು ಕೆಳಗಿಳಿಸಿ ನನಗೆ ಅವಕಾಶ ಕಲ್ಪಿಸಿರುವುದು ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ. ನನಗೆ ಈ ವಿಷಯ ಗೊತ್ತಾಗಿದ್ದರೆ ನಾನು ಪ್ರಯಾಣಿಸುತ್ತಿರಲಿಲ್ಲ ಎಂದು ಕಿರಣ್ ರಿಜಿಜು ತಿಳಿಸಿದ್ದಾರೆ.
ಈ ಪ್ರಕರಣದ ಬಗ್ಗೆ ಏರ್ ಇಂಡಿಯಾ ಅಧಿಕಾರಿಗಳು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.