ಬೆಂಗಳೂರು: ಸಚಿವರು ಕೆಪಿಸಿಸಿ ಕಚೇರಿಗೆ ಕಾಲಕಾಲಕ್ಕೆ ಭೇಟಿ ನೀಡಲೇಬೇಕು, ಕಾರ್ಯಕರ್ತರ ಅಹವಾಲು ಆಲಿಸಬೇಕು ಎಂದು ಸೂಚಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಅವರು ಎಲ್ಲ ಸಚಿವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ.
‘ವೇಳಾಪಟ್ಟಿಗೆ ಅನುಗುಣವಾಗಿ ಕೆಪಿಸಿಸಿ ಕಚೇರಿಗೆ ಭೇಟಿ ನೀಡಬೇಕು ಎಂದು ಈ ಹಿಂದೆಯೇ ಸೂಚಿಸಲಾಗಿತ್ತು. ಆದರೆ ಅದು ಸರಿಯಾಗಿ ಪಾಲನೆ ಆಗುತ್ತಿಲ್ಲ’ ಎಂದು ಪರಮೇಶ್ವರ್ ಅವರು ಪತ್ರದಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ವಿಚಾರವನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರು ಗಮನಿ-ಸುತ್ತಿದ್ದಾರೆ. ಹಾಗಾಗಿ ಇನ್ನು ಮುಂದೆ ಎಲ್ಲ ಸಚಿವರು ವೇಳಾಪಟ್ಟಿಗೆ ಅನುಗುಣವಾಗಿ ಕಚೇರಿಗೆ ಭೇಟಿ ನೀಡಿ, ಕಾರ್ಯಕರ್ತರ ಅಹವಾಲು ಸ್ವೀಕರಿಸಬೇಕು ಎಂದು ಪರಮೇಶ್ವರ್ ತಾಕೀತು ಮಾಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.