ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿರುವುದು ಸ್ವಾಗತಾರ್ಹ (ಪ್ರ.ವಾ., ನ.17). ಸ್ಥಳದ ಆಯ್ಕೆ ಬಗ್ಗೆ ಇದ್ದ ಗೊಂದಲ ನಿವಾರಣೆ ಆದಂತಾಯಿತು.
ಇತಿಹಾಸ ಪ್ರಸಿದ್ಧ ಶ್ರವಣಬೆಳಗೊಳ ಧರ್ಮ, ಸಾಹಿತ್ಯ, ಸಂಸ್ಕೃತಿಗಳ ಸಂಗಮ ಸ್ಥಳ. ವೈರಾಗ್ಯ ಮೂರ್ತಿ ಗೊಮ್ಮಟೇಶ್ವರ ನೆಲೆಸಿರುವ ಪವಿತ್ರ ಸ್ಥಳವಾಗಿದೆ.
ಈ ಹಿಂದೆ, 1967ರಲ್ಲಿ ಶ್ರವಣಬೆಳಗೊಳದಲ್ಲಿ 46ನೇ ಕನ್ನಡ ಸಾಹಿತ್ಯ ಸಮ್ಮೇಳನ, ವಿಖ್ಯಾತ ವಿದ್ವಾಂಸರಾಗಿದ್ದ ಡಾ.ಆ.ನೇ. ಉಪಾಧ್ಯೆ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.