ಶಾಸಕ ಪಿ.ಎಂ. ನರೇಂದ್ರಸ್ವಾಮಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ವಿಷಯಗಳಿಗೆ ಅದರಲ್ಲೂ ತೀರ ಹಿಂದುಳಿದ ಗ್ರಾಮಗಳ ಶಾಲೆಗಳಲ್ಲಿ ಶಿಕ್ಷಣ ನೀಡಬೇಕಿದೆ ಇದಕ್ಕೆ ಸಹಕಾರ ನೀಡುತ್ತೇನೆ, ಇದರ ವಿಷಯದಲ್ಲಿ ಯಾರು ರಾಜಕೀಯ ಬೆರಸಿ ವ್ಯವಸ್ಥೆ ಹದಗೆಡಿಸಬೇಡಿ ಎಂದು ಮನವಿ ಮಾಡಿದರು.
ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳ ದಾನ ನೀಡಿದ ದೇವರಾಜಚಾರಿ, ಸೊತ್ತಮಾದೇಗೌಡ, ಲೇಖಕಿ ಸರಸ್ವತಿ ಸೋಮನಾಥ್ ಅವರನ್ನು ಸನ್ಮಾನಿಸಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಸ್. ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಎಂ. ಸತೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಹದೇವಮ್ಮ, ಎಸ್ಡಿಎಂಸಿ ಚೌಡೇಗೌಡ, ಗ್ರಾಮ ಪಂಚಾಯಿತಿ ಸದಸ್ಯ ಮಹದೇವಯ್ಯ, ಸಮುತ್ಥಾನ್. ಲಿ. ಮಾಜಿ ಉಪಾಧ್ಯಕ್ಷ ದಿನಕರಮೂರ್ತಿಕೃಷ್ಣ, ಜ್ಞಾನವಿ ಗ್ರಾಮೀಣಾಭಿವೃದ್ಧಿ ತಂಡದ ಅಧ್ಯಕ್ಷ ಎಂ. ನಾಗರಾಜು ಹಾಗೂ ಪದಾಧಿಕಾರಿಗಳು,