<p><strong>ಬೆಂಗಳೂರು: </strong>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದ 56 ಗಣ್ಯರು ಮತ್ತು ಎರಡು ಸಂಘ–ಸಂಸ್ಥೆಗಳಿಗೆ 2013ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.<br /> <br /> ‘ಪ್ರಜಾವಾಣಿ’ಯ ಸಹ ಸಂಪಾದಕಿ ಸಿ.ಜಿ. ಮಂಜುಳಾ, ‘ಸುಧಾ’ ವಾರಪತ್ರಿಕೆಯ ಸುದ್ದಿ ಸಂಪಾದಕ ಗುಡಿಹಳ್ಳಿ ನಾಗ ರಾಜ ಸೇರಿದಂತೆ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ಪ್ರಶಸ್ತಿಗೆ ಆಯ್ಕೆಯಾದ ಗಣ್ಯರ ಪೈಕಿ ಎಚ್. ಫ್ಲೋರಿನಾ ಬಾಯಿ, ಡಾ.ಎಸ್. ಅಯ್ಯಪ್ಪನ್ ಮತ್ತು ಶೀಲಾಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಅವರಿಗೆ ನಂತರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾರ್ಯಕ್ರಮ ದಲ್ಲಿ ಘೋಷಿಸಲಾಯಿತು.<br /> <br /> <strong>ಗಾಯಕವಾಡ್ ಆಯ್ಕೆ</strong>: ಕ್ರೀಡಾ ವಿಭಾಗದಲ್ಲಿ ಬಳ್ಳಾರಿಯ ಜಿ.ಎಚ್. ತುಳಸೀಧರ ಅವರ ಹೆಸರನ್ನು ಅಂತಿಮ ಗೊಳಿಸಲಾಗಿತ್ತು. ಆದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ಇದೆ ಎಂಬ ಕಾರಣಕ್ಕೆ ಅವರ ಹೆಸರನ್ನು ಕೈಬಿಡಲಾಯಿತು. ಶರತ್ ಎಂ. ಗಾಯಕವಾಡ್ ಅವರನ್ನು ಆಯ್ಕೆ ಮಾಡಿ, ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜಧಾನಿ ಬೆಂಗಳೂರಿನಲ್ಲಿ ಕನ್ನಡೇತರರೇ ಬಹುಸಂಖ್ಯಾತರು ಎಂಬ ಸಂಗತಿ ನೋವು ತರುವಂಥದ್ದು. ಅವರೆಲ್ಲರೂ ಕನ್ನಡದಲ್ಲೇ ವ್ಯವಹರಿಸುವಂತೆ ಮಾಡಬೇಕಾ ಗಿದ್ದು ಇದು ಎಲ್ಲ ಕನ್ನಡಿಗರ ಜವಾಬ್ದಾರಿ’ ಎಂದು ಹೇಳಿದರು.<br /> ‘ಡಾ. ಅಯ್ಯಪ್ಪನ್ ಅವರನ್ನು ಹೊರತುಪಡಿಸಿ ಇನ್ಯಾರ ಹೆಸರನ್ನೂ ನಾನು ಆಯ್ಕೆ ಸಮಿತಿಗೆ ಸೂಚಿಸಿಲ್ಲ. ಪ್ರಶಸ್ತಿ ಬಯಸಿ ಅರ್ಜಿ ಸಲ್ಲಿಸದವರನ್ನೂ ಸಮಿತಿ ಗುರುತಿಸಿದೆ’ ಎಂದರು.<br /> <br /> ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಸಾಹಿತಿ ಕೋ. ಚೆನ್ನಬಸಪ್ಪ, ‘ಕೆಲವರಿಗೆ ತಡವಾಗಿಯಾದರೂ ಪ್ರಶಸ್ತಿ ಬಂದಿರುವುದು ಸಂತಸದ ವಿಚಾರ’ ಎಂದರು. ‘ಕಲಾವಿದರ ವೈದ್ಯಕೀಯ ವೆಚ್ಚಗಳಿಗೆ ಸರ್ಕಾರದಿಂದ ಸಹಾಯ ಬೇಕು’ ಎಂದು ಪ್ರಶಸ್ತಿ ಪುರಸ್ಕೃತ ಕಿರುತೆರೆ ನಟಿ ಗಿರಿಜಾ ಲೋಕೇಶ್ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮೆರೆದ 56 ಗಣ್ಯರು ಮತ್ತು ಎರಡು ಸಂಘ–ಸಂಸ್ಥೆಗಳಿಗೆ 2013ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.<br /> <br /> ‘ಪ್ರಜಾವಾಣಿ’ಯ ಸಹ ಸಂಪಾದಕಿ ಸಿ.ಜಿ. ಮಂಜುಳಾ, ‘ಸುಧಾ’ ವಾರಪತ್ರಿಕೆಯ ಸುದ್ದಿ ಸಂಪಾದಕ ಗುಡಿಹಳ್ಳಿ ನಾಗ ರಾಜ ಸೇರಿದಂತೆ ಗಣ್ಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಿದರು.<br /> <br /> ಪ್ರಶಸ್ತಿಗೆ ಆಯ್ಕೆಯಾದ ಗಣ್ಯರ ಪೈಕಿ ಎಚ್. ಫ್ಲೋರಿನಾ ಬಾಯಿ, ಡಾ.ಎಸ್. ಅಯ್ಯಪ್ಪನ್ ಮತ್ತು ಶೀಲಾಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ. ಅವರಿಗೆ ನಂತರ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಾರ್ಯಕ್ರಮ ದಲ್ಲಿ ಘೋಷಿಸಲಾಯಿತು.<br /> <br /> <strong>ಗಾಯಕವಾಡ್ ಆಯ್ಕೆ</strong>: ಕ್ರೀಡಾ ವಿಭಾಗದಲ್ಲಿ ಬಳ್ಳಾರಿಯ ಜಿ.ಎಚ್. ತುಳಸೀಧರ ಅವರ ಹೆಸರನ್ನು ಅಂತಿಮ ಗೊಳಿಸಲಾಗಿತ್ತು. ಆದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ಇದೆ ಎಂಬ ಕಾರಣಕ್ಕೆ ಅವರ ಹೆಸರನ್ನು ಕೈಬಿಡಲಾಯಿತು. ಶರತ್ ಎಂ. ಗಾಯಕವಾಡ್ ಅವರನ್ನು ಆಯ್ಕೆ ಮಾಡಿ, ಪ್ರಶಸ್ತಿ ಪ್ರದಾನ ಮಾಡಲಾಯಿತು.<br /> <br /> ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ರಾಜಧಾನಿ ಬೆಂಗಳೂರಿನಲ್ಲಿ ಕನ್ನಡೇತರರೇ ಬಹುಸಂಖ್ಯಾತರು ಎಂಬ ಸಂಗತಿ ನೋವು ತರುವಂಥದ್ದು. ಅವರೆಲ್ಲರೂ ಕನ್ನಡದಲ್ಲೇ ವ್ಯವಹರಿಸುವಂತೆ ಮಾಡಬೇಕಾ ಗಿದ್ದು ಇದು ಎಲ್ಲ ಕನ್ನಡಿಗರ ಜವಾಬ್ದಾರಿ’ ಎಂದು ಹೇಳಿದರು.<br /> ‘ಡಾ. ಅಯ್ಯಪ್ಪನ್ ಅವರನ್ನು ಹೊರತುಪಡಿಸಿ ಇನ್ಯಾರ ಹೆಸರನ್ನೂ ನಾನು ಆಯ್ಕೆ ಸಮಿತಿಗೆ ಸೂಚಿಸಿಲ್ಲ. ಪ್ರಶಸ್ತಿ ಬಯಸಿ ಅರ್ಜಿ ಸಲ್ಲಿಸದವರನ್ನೂ ಸಮಿತಿ ಗುರುತಿಸಿದೆ’ ಎಂದರು.<br /> <br /> ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಸಾಹಿತಿ ಕೋ. ಚೆನ್ನಬಸಪ್ಪ, ‘ಕೆಲವರಿಗೆ ತಡವಾಗಿಯಾದರೂ ಪ್ರಶಸ್ತಿ ಬಂದಿರುವುದು ಸಂತಸದ ವಿಚಾರ’ ಎಂದರು. ‘ಕಲಾವಿದರ ವೈದ್ಯಕೀಯ ವೆಚ್ಚಗಳಿಗೆ ಸರ್ಕಾರದಿಂದ ಸಹಾಯ ಬೇಕು’ ಎಂದು ಪ್ರಶಸ್ತಿ ಪುರಸ್ಕೃತ ಕಿರುತೆರೆ ನಟಿ ಗಿರಿಜಾ ಲೋಕೇಶ್ ಕೋರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>