ನಾಸಿಕ್(ಮಹಾರಾಷ್ಟ್ರ): ಈಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆ ಹಾನಿಯಾಗಿದ್ದು, ಸಾಲ ಮರುಪಾವತಿ ಮಾಡಲು ಆಗುವುದಿಲ್ಲ ಎಂದು ರೈತರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸತಾನಾ ಹೋಬಳಿಯ ಪಿಂಗಳವಾಡಿಯಲ್ಲಿ ಮಂಗಳವಾರ ನಡೆದಿದೆ.
‘ಮೃತರನ್ನು ಚಾಬು ಮೋಹನ್ ಭಾಮ್ರೆ(63) ಎಂದು ಗುರುತಿಸಲಾಗಿದೆ. ಇವರು ಸುಮಾರು ₨ 9 ಲಕ್ಷ ಸಾಲ ಮಾಡಿಕೊಂಡಿದ್ದರು. ಅಕಾಲಿಕ ಮಳೆಯಿಂದಾಗಿ ಇವರು ಬೆಳೆದಿದ್ದ ಬೆಳೆ ಸಂಪೂರ್ಣವಾಗಿ ನಾಶವಾಗಿತ್ತು.