ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತಿ ಯು.ಆರ್‌.ಅನಂತಮೂರ್ತಿ ಇನ್ನಿಲ್ಲ

Last Updated 22 ಆಗಸ್ಟ್ 2014, 15:27 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ (81) ಅವರು ಶುಕ್ರವಾರ ಸಂಜೆ ನಿಧನರಾದರು.

ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಚಿಕಿತ್ಸೆಗಾಗಿ ಅವರನ್ನು ಶುಕ್ರವಾರ ಬೆಳಿಗ್ಗೆ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಎರಡೂ ಕಿಡ್ನಿಗಳೂ ಕೆಲಸ ಮಾಡುತ್ತಿರಲಿಲ್ಲ. ಜತೆಗೆ ಹೃದಯ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ರಜೆ ಘೋಷಣೆ
ಸಾಹಿತಿ ಯು.ಆರ್‌. ಅನಂತಮೂರ್ತಿ ವಿಧಿವಶರಾದ ಕಾರಣ ಅವರ ಗೌರವಾರ್ಥವಾಗಿ ರಾಜ್ಯ ಸರ್ಕಾರ ಶನಿವಾರ ರಜೆ ಘೋಷಿಸಿದೆ. ಸರ್ಕಾರಿ ಕಚೇರಿ, ಶಾಲೆ– ಕಾಲೇಜುಗಳಿಗೆ ಶನಿವಾರ ರಜೆ ಇರಲಿದೆ. ರಾಜ್ಯದ್ಯಾಂತ 3 ದಿನಗಳ ಕಾಲ ಶೋಕಾಚರಣೆ ಜಾರಿಯಲ್ಲಿರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT