ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ ಆತಿಥ್ಯಕ್ಕೆ ಧಾರವಾಡ ಸಿದ್ಧ

Last Updated 18 ಆಗಸ್ಟ್ 2014, 19:30 IST
ಅಕ್ಷರ ಗಾತ್ರ

ಧಾರವಾಡ : ‘81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸುವ ಅವ­ಕಾಶ­ವನ್ನು ನಮಗೆ ನೀಡಿದಲ್ಲಿ ಆತಿಥ್ಯ ವಹಿಸಲು ಸಿದ್ಧವಿದ್ದೇವೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ಕಸಾಪ ಶತಮಾನೋತ್ಸವ ಸಮಾ­ರಂಭವನ್ನು ಜಿಲ್ಲಾ ಘಟಕದಿಂದ ಈಗಾಗಲೇ ಯಶಸ್ವಿ­ಯಾಗಿ ಸಂಘಟಿಸಿದ್ದೇವೆ. ಅದೇ ರೀತಿ ಅಖಿಲ ಭಾರತ ಸಾಹಿತ್ಯ ಸಮ್ಮೇಳವನ್ನೂ ಮಾಡಲು ಸಿದ್ಧರಿದ್ದೇವೆ’ ಎಂದರು.

‘ಶತಮಾನೋತ್ಸವದಂತಹ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್‌ ಕೇಂದ್ರ ಸಮಿತಿ ಅಧ್ಯಕ್ಷ ಪುಂಡಲೀಕ ಹಾಲಂಬಿ ನಮಗೆ ಅವಕಾಶ ನೀಡಿ­ದ್ದರು. ಹಾಗಾಗಿ ನಾವಾಗಿಯೇ ಸಾಹಿತ್ಯ ಸಮ್ಮೇಳನದ ಆತಿಥ್ಯವನ್ನು ಜಿಲ್ಲೆಗೆ ಕೊಡಿ ಎಂದು ಕೇಳುವುದಿಲ್ಲ. ಅವರಾಗಿಯೇ ಕೊಟ್ಟರೆ ಯಶಸ್ವಿಯಾಗಿ ನಿಭಾ­ಯಿಸು­ತ್ತೇವೆ’ ಅಂಗಡಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT