ಹಾಸನ: ಶ್ರವಣಬೆಳಗೊಳದಲ್ಲಿ ನಡೆಯಲಿರುವ ಅಖಿಲ ಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಆಸಕ್ತ ಕಲಾವಿದರು, ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ ಆರು ಕೊನೆಯ ದಿನ.
ಅರ್ಜಿ ಸಲ್ಲಿಸಬೇಕಾಗಿರುವ ವಿಳಾಸ: ‘ಪ್ರಧಾನ ಸಂಚಾಲಕರು, ಸಾಂಸ್ಕೃತಿಕ ಸಮಿತಿ, ಅಖಿಲ ಭಾರತ 81ನೇ ಕನ್ನಡ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಾಲಯ, ಹಾಸನ-–573 201’ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ವಿವರಗಳಿಗೆ ಮೊ: 91415 11542 ಸಂಪರ್ಕಿಸಬಹುದು.