ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ ಶ್ರವಣಬೆಳಗೊಳದಲ್ಲಿ

Last Updated 16 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಹಾಸನ: ಅಖಿಲ ಭಾರತ 81ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾಸನ ಜಿಲ್ಲೆಯ ಶ್ರವಣ­ಬೆಳಗೊಳ­ದಲ್ಲಿ ನಡೆಸಲು ಭಾನು­ವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಬೇಲೂರಿನ ಪುರಸಭೆಯ ಸಭಾಭವನ­ದಲ್ಲಿ ಅಧ್ಯಕ್ಷ ಪುಂಡಲೀಕ ಹಾಲಂಬಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಮೈಸೂರು, ಕಲಬುರ್ಗಿ, ಬೀದರ್‌, ಶಿವಮೊಗ್ಗ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯವರು ತಮ್ಮ ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ಆಯೋಜಿಸು­ವಂತೆ ಸಭೆಯಲ್ಲಿ ಮನವಿ ಮಾಡಿದರು. ಈ ಬಗ್ಗೆ ಚರ್ಚಿಸಿ ಕೊನೆಗೆ ಶ್ರವಣಬೆಳಗೊಳದಲ್ಲಿ ಸಮ್ಮೇಳನ ನಡೆಸಲು ಸರ್ವಾನುಮತದ ತೀರ್ಮಾನ ಕೈಗೊಳ್ಳಲಾಯಿತು.

ಪ್ರತಿಭಟನೆ: ಪುರಸಭೆ ಸಭಾಭವನದಲ್ಲಿ ಕಸಾಪ ಕಾರ್ಯಕಾರಿ ಸಮಿತಿ ಸಭೆ ನಡೆಯು­ತ್ತಿದ್ದರೆ, ಹೊರಗಡೆ ಹಾವೇರಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಹೋರಾಟ ಸಮಿತಿ ಸದಸ್ಯರು ಸಮ್ಮೇಳನವನ್ನು ಹಾವೇರಿ ಜಿಲ್ಲೆ­ಯಲ್ಲೇ ನಡೆ­ಸು­ವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.
‘81ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿ ಜಿಲ್ಲೆಯಲ್ಲಿ ಆಯೋಜಿಸದಿದ್ದರೆ ನ. 21ರಂದು ಹಾವೇರಿ ಜಿಲ್ಲಾ ಬಂದ್‌ ಹಾಗೂ ಡಿ. 15ರಂದು ಉತ್ತರ ಕರ್ನಾಟಕ ಬಂದ್‌ಗೆ ಕರೆ ನೀಡುತ್ತೇವೆ. ಜತೆಗೆ, ಪ್ರತ್ಯೇಕ ರಾಜ್ಯ ಬೇಡಿಕೆಯ ಹೋರಾಟವನ್ನೂ ತೀವ್ರ­ಗೊಳಿಸ­ಬೇಕಾಗುತ್ತದೆ’ ಎಂದು ಹೋರಾಟ ಸಮಿ­ತಿಯ ಅಧ್ಯಕ್ಷ ಎಂ.ಬಿ. ಜಯದೇವಪ್ಪ ಎಚ್ಚರಿಕೆ ನೀಡಿದರು.

ಪ್ರತಿಭಟನೆ ಹೊರತಾಗಿಯೂ ಸಮ್ಮೇಳನ­ವನ್ನು ಶ್ರವಣಬೆಳಗೊಳದಲ್ಲಿ ನಡೆಸಲು ತೀರ್ಮಾನಿಸಿದ್ದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ಸಭೆ ಮುಗಿಸಿ ಹೊರಬಂದ ಅಧ್ಯಕ್ಷ ಪುಂಡಲೀಕ ಹಾಲಂಬಿ ಅವರ ಕಾರನ್ನು ಅಡ್ಡಗಟ್ಟಿದರು. ಅವರ ವಿರುದ್ಧ ಹಾಗೂ ಸಾಹಿತ್ಯ ಪರಿಷತ್ತಿನ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರು ಹಾಗೂ ಕಸಾಪ ಪದಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ಎಲ್ಲರನ್ನೂ ಚದುರಿಸಿ ಪರಿಸ್ಥಿತಿ ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT