ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ರಾಕೇಶ್ ಸಿದ್ದರಾಮಯ್ಯ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರಾಕೇಶ್ ಬೆಲ್ಜಿಯಂನ ಬ್ರುಸೆಲ್ಸ್ ಯೂನಿವರ್ಸಟಿ ಆಸ್ಪತ್ರೆಗೆ ದಾಖಲಾಗಿದ್ದರು.
ಬೆಲ್ಜಿಯಂ ಪ್ರವಾಸದಲ್ಲಿದ್ದ ರಾಕೇಶ್ ಅಲ್ಲಿಗೆ ತೆರಳುವ ಮುನ್ನವೆ ಯಕೃತ್ (ಲಿವರ್) ಸಮಸ್ಯೆಯಿಂದ ಬಳಲುತ್ತಿದ್ದರು. ಪ್ರವಾಸದ ವೇಳೆ ಅವರ ಆರೋಗ್ಯ ಹದಗೆಟ್ಟಿತ್ತು. ಜತೆಗೆ ಕಡಿಮೆ ರಕ್ತದ ಒತ್ತಡ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಜತೆಗೆ ಅವರ ಎರಡನೆ ಪುತ್ರ ಡಾ. ಯತೀಂದ್ರ, ಕುಟುಂಬ ವೈದ್ಯ ಡಾ.ರವಿಕುಮಾರ್, ರಾಕೇಶ್ ಅವರ ಪತ್ನಿ ಈಗಾಗಲೆ ಬೆಲ್ಜಿಯಂಗೆ ತೆರಳಿದ್ದಾರೆ.