ಬೆಂಗಳೂರು/ತಿರುವಂತಪುರ/ಚೆನ್ನೈ (ಪಿಟಿಐ): ಕೇರಳ ಹಾಗೂ ಕರ್ನಾಟಕದ ಮುಖ್ಯಮಂತ್ರಿಗಳಾದ ಉಮ್ಮನ್ ಚಾಂಡಿ ಹಾಗೂ ಸಿದ್ದರಾಮಯ್ಯ ಅವರು ಸೋಮವಾರ ನಡೆಯಲಿರುವ ನರೇಂದ್ರ ಮೋದಿ ಅವರ ಪದಗ್ರಹಣ ಸಮಾರಂಭಕ್ಕೆ ಗೈರಾಗಲಿದ್ದಾರೆ.
ಆದರೆ ಪ್ರಮಾಣ ವಚನ ಸಮಾರಂಭಕ್ಕೆ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರನ್ನು ಆಹ್ವಾನಿಸಿದ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಮೋದಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಬಹಿಷ್ಕರಿಸಲಿದ್ದಾರೆ ಎಂಬ ಊಹಾಪೋಹಗಳಿದ್ದು, ಈ ಸಂಬಂಧ ಅವರು ತಮ್ಮ ಗುಟ್ಟು ಬಿಟ್ಟುಕೊಟ್ಟಿಲ್ಲ.