ಚನ್ನರಾಯಪಟ್ಟಣ: ಶ್ರವಣಬೆಳಗೊಳ ಹೋಬಳಿ ಸುಗ್ಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ತೋಟದಲ್ಲಿ ಇಟ್ಟಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಗುರುವಾರ ಮುಂಜಾನೆ ಸೆರೆ ಸಿಕ್ಕಿದೆ.
ಗ್ರಾಮದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಅರಣ್ಯ ಇಲಾಖೆ ಐದು ದಿನಗಳ ಹಿಂದೆ ಬೋನು ಇರಿಸಿ ಅದರ ಒಳಗೆ ನಾಯಿಯನ್ನು ಕಟ್ಟಿಹಾಕಿತ್ತು. ನಾಯಿಯನ್ನು ತಿನ್ನಲು ಬಂದು ಚಿರತೆ ಬೋನಿಗೆ ಬಿದ್ದಿದೆ.
ಚಿರತೆಯನ್ನು ನಾಗರಹೊಳೆ ಅರಣ್ಯ ಪ್ರದೇಶಕ್ಕೆ ಬಿಡಲಾಯಿತು ಎಂದು ವಲಯ ಅರಣ್ಯಾಧಿಕಾರಿ ಎ.ಈ. ಧರ್ಮಪ್ಪ ತಿಳಿಸಿದ್ದಾರೆ.