ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುನಂದಾ ಪ್ರಕರಣ: ಅಮರ್ ಸಿಂಗ್‌ ವಿಚಾರಣೆ

Last Updated 28 ಜನವರಿ 2015, 10:18 IST
ಅಕ್ಷರ ಗಾತ್ರ

ನವದೆಹಲಿ: ಸುನಂದಾ ಪುಷ್ಕರ್‌ ಕೊಲೆ ಪ್ರಕರಣ ಸಂಬಂಧ ದೆಹಲಿ ಪೊಲೀಸರು ಬುಧವಾರ ಸಮಾಜವಾದಿ ಪಕ್ಷದ ಮುಖಂಡ ಅಮರ್‌ ಸಿಂಗ್‌ ಅವರ ವಿಚಾರಣೆ ನಡೆಸಿದ್ದಾರೆ.

‘ಸುನಂದಾ ಪುಷ್ಕರ್‌ ಕೊಲೆ ಪ್ರಕರಣದ ಬಗ್ಗೆ ಅಮರ್‌ ಸಿಂಗ್‌ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಪ್ರಕರಣದ ಬಗ್ಗೆ ಅವರಿಂದ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಉದ್ದೇಶದಿಂದ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ‌’ ಎಂದು ದೆಹಲಿ ಪೊಲೀಸ್‌ ಕಮಿಷನರ್‌ ಬಿ.ಎಸ್‌.ಬಸ್ಸಿ ತಿಳಿಸಿದ್ದಾರೆ.

ಸುನಂದಾ ಪುಷ್ಕರ್‌ ಸಾವನ್ನಪ್ಪುವ ಎರಡು ದಿನಗಳ ಮುನ್ನಾ ಐಪಿಎಲ್‌ ಕುರಿತು ಮಾತನಾಡಲು ತನ್ನನ್ನು ಕರೆದಿದ್ದರು ಎಂದು ಅಮರ್‌ ಸಿಂಗ್‌ ಹೇಳಿದ್ದರು.

‘ಐಪಿಎಲ್‌ಗೂ ಸುನಂದಾ ಕೊಲೆ ಪ್ರಕರಣಕ್ಕೂ ಸಂಬಂಧವಿದೆಯೇ ಎಂಬುದು ತನಿಖೆ ಪೂರ್ಣಗೊಂಡ ಬಳಿಕವಷ್ಟೇ ಗೊತ್ತಾಗಬೇಕಿದೆ’ ಎಂದು ಬಸ್ಸಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT