ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂರ್ಯಪ್ರಕಾಶ್‌ ಪ್ರಸಾರ ಭಾರತಿ ಅಧ್ಯಕ್ಷ

Last Updated 28 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ:  ಕನ್ನಡಿಗರಾದ ಹಿರಿಯ ಪತ್ರಕರ್ತ ಅರಕಲಗೂಡು ಸೂರ್ಯಪ್ರಕಾಶ್‌ ಅವರು ಪ್ರಸಾರ ಭಾರತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಉಪರಾಷ್ಟ್ರಪತಿ ಎಂ.ಹಮೀದ್‌ ಅನ್ಸಾರಿ ಅವರ ನೇತೃತ್ವದ ಮೂವರ ಸಮಿತಿಯು ಮೂರು ವರ್ಷಗಳ ಪೂರ್ಣಾವಧಿಗೆ ಈ ನೇಮಕ ಮಾಡಿದೆ.

ದೆಹಲಿ ಮೂಲದ ಚಿಂತಕರ ಕೂಟವಾದ ವಿವೇಕಾನಂದ ಅಂತರರಾಷ್ಟ್ರೀಯ ಪ್ರತಿಷ್ಠಾನದಲ್ಲಿ ತೊಡಗಿಸಿಕೊಂಡಿರುವ ಪ್ರಕಾಶ್‌ ಅವರು ಮುದ್ರಣ ಮತ್ತು ಎಲೆಕ್ಟ್ರಾನಿಕ್‌ ಮಾಧ್ಯಮ ಕ್ಷೇತ್ರದಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದಾರೆ. ಮೃಣಾಲ್‌ ಪಾಂಡೆ ಅವರು ಏ.೩೦ರಂದು ತಮ್ಮ ಅವಧಿಯನ್ನು ಮುಗಿಸಿದಾಗಿನಿಂದ ಈ ಸ್ಥಾನ ಖಾಲಿ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT