ನವದೆಹಲಿ(ಐಎಎನ್ಎಸ್): ಅನಾರೋಗ್ಯದ ಕಾರಣದಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಂದು ದಿನದ ಮಹಾರಾಷ್ಟ್ರ ಪ್ರವಾಸವನ್ನು ಭಾನುವಾರ ರದ್ದುಗೊಳಿಸಿದ್ದಾರೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸರಿಯಿಲ್ಲ ಎಂದು ಹೇಳಿರುವ ಕಾಂಗ್ರೆಸ್ ಈ ಬಗ್ಗೆ ಯಾವುದೇ ವಿವರಗಳನ್ನು ನೀಡಲು ನಿರಾಕರಿಸಿದೆ.
ಸೋನಿಯಾ ಗಾಂಧಿ ಅವರು ಮುಂಬೈ, ಧುಲೆ ಮತ್ತು ನಂದುರ್ಬಾರ್ಗಳಲ್ಲಿ ರ್ಯಾಲಿಗಳನ್ನುದ್ದೇಶಿಸಿ ಮಾತನಾಡಬೇಕಾಗಿತ್ತು.
ಅವರ ಅನುಪಸ್ಥಿತಿಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮುಂಬೈ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಟ, ಕಾಂಗ್ರೆಸ್ ಮುಖಂಡ ರಾಜ್ಬಬ್ಬರ್ ಮತ್ತು ಕೇಂದ್ರ ಆರೋಗ್ಯ ಸಚಿವ ಗುಲಾಮ್ ನಬಿ ಆಜಾದ್ ಕೂಡ ಭಾಗವಹಿಸಲಿದ್ದಾರೆ’ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.