<p>ಬೆಂಗಳೂರು: ‘ರಾಜ್ಯದಲ್ಲಿ ಅನೇಕ ಸ್ಮಾರಕಗಳಿದ್ದು, ಅವುಗಳ ಮಾಹಿತಿ ದಾಖಲಿಸುವ ಕೆಲಸ ಆಗಬೇಕಾಗಿದೆ’ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸರ್ವಿಸಸ್ ಅಧ್ಯಕ್ಷ ಟಿ.ವಿ. ಮೋಹನದಾಸ್ ಪೈ ಅಭಿಪ್ರಾಯಪಟ್ಟರು.<br /> <br /> ವಿಶ್ವ ಪರಂಪರೆ ದಿನದ ಅಂಗವಾಗಿ ಬೆಂಗಳೂರು ಕೋಟೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ವಿಶ್ವ ಪರಂಪರೆಯ ಸ್ಮಾರಕಗಳು’ ಮತ್ತು ‘ಬೆಂಗಳೂರು ವಲಯದ ಪ್ರಮುಖ ಸ್ಮಾರಕಗಳ’ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತನಾಡಿದರು.<br /> <br /> ‘ನಮ್ಮ ದೇಶಕ್ಕೆ ಹೋಲಿಸಿದರೆ ವಿದೇಶಗಳಲ್ಲಿ ಐತಿಹಾಸಿಕ ಸ್ಮಾರಕಗಳು ಕಡಿಮೆ. ಆದರೆ, ಅವರು ಸಣ್ಣಪುಟ್ಟ ಸ್ಮಾರಕಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿಯನ್ನು ದಾಖಲಿಸಿದ್ದಾರೆ’ ಎಂದರು.<br /> <br /> ‘ಅಮೆರಿಕ, ಬ್ರಿಟನ್ನಲ್ಲಿ ಪ್ರತಿಯೊಂದನ್ನು ಸರಿಯಾಗಿ ದಾಖಲಿಸಿದ್ದಾರೆ. ಇದರಿಂದ ಜನರಿಗೆ ಬೇಕಾದ ಮಾಹಿತಿ ಸಿಗುತ್ತದೆ’ ಎಂದು ಹೇಳಿದರು.<br /> ‘ಮುಂದಿನ ತಲೆಮಾರಿಗೆ ನಮ್ಮ ಇತಿಹಾಸದ ಬಗ್ಗೆ ತಿಳಿಸಿಕೊಡಲು ಸ್ಮಾರಕಗಳನ್ನು ಸಂರಕ್ಷಿಸಬೇಕಾಗಿದೆ’ ಎಂದರು.<br /> <br /> ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ಡಾ. ಟಿ. ಅರುಣ್ ರಾಜ್ ಮಾತನಾಡಿ, ‘ಟಿಪ್ಪು ಶಸ್ತ್ರಾಗಾರವನ್ನು ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆ ಮುಂದುವರೆದಿದೆ’ ಎಂದರು.<br /> <br /> ‘ಯುನೆಸ್ಕೊ ಘೋಷಣೆಯಂತೆ ವಿಶ್ವ ಪರಂಪರೆ ದಿನ ಆಚರಿಸಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಖಾಸಗಿಯವರ ಬೆಂಬಲ ಬೇಕಾಗಿದೆ’ ಎಂದರು.<br /> <br /> ಇದೇ ವೇಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಸ್ಮಾರಕಗಳಿಗೆ ಸಂಬಂಧಿಸಿದ ಮಾಹಿತಿ ಒಳಗೊಂಡ ‘ಕಲಾ ವೈಭವ’ ಕಿರು ಹೊತ್ತಿಗೆ ಹಾಗೂ ‘ಇನ್ಟ್ಯಾಕ್ ಸೋನಾಟ ಆ್ಯಪ್’ ಬಿಡುಗಡೆ ಮಾಡಲಾಯಿತು.<br /> <br /> ಸತ್ಯಪ್ರಕಾಶ್, ಎಸ್ಪಿವಿ ಹಳಕಟ್ಟಿ ಉಪಸ್ಥಿತರಿದ್ದರು. ಡಾ. ಎನ್. ರಾಜಂ ಅವರು ಹಿಂದೂಸ್ತಾನಿ ಹಾಗೂ ಟಿ.ಎಂ. ಕೃಷ್ಣ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿಕೊಟ್ಟರು.<br /> <br /> ಭಾರತೀಯ ಪುರಾತತ್ವ ಇಲಾಖೆ ಮತ್ತು ಇನ್ಟ್ಯಾಕ್ ಬೆಂಗಳೂರು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ರಾಜ್ಯದಲ್ಲಿ ಅನೇಕ ಸ್ಮಾರಕಗಳಿದ್ದು, ಅವುಗಳ ಮಾಹಿತಿ ದಾಖಲಿಸುವ ಕೆಲಸ ಆಗಬೇಕಾಗಿದೆ’ ಎಂದು ಮಣಿಪಾಲ್ ಗ್ಲೋಬಲ್ ಎಜುಕೇಷನ್ ಸರ್ವಿಸಸ್ ಅಧ್ಯಕ್ಷ ಟಿ.ವಿ. ಮೋಹನದಾಸ್ ಪೈ ಅಭಿಪ್ರಾಯಪಟ್ಟರು.<br /> <br /> ವಿಶ್ವ ಪರಂಪರೆ ದಿನದ ಅಂಗವಾಗಿ ಬೆಂಗಳೂರು ಕೋಟೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ‘ವಿಶ್ವ ಪರಂಪರೆಯ ಸ್ಮಾರಕಗಳು’ ಮತ್ತು ‘ಬೆಂಗಳೂರು ವಲಯದ ಪ್ರಮುಖ ಸ್ಮಾರಕಗಳ’ ಛಾಯಾಚಿತ್ರ ಪ್ರದರ್ಶನದಲ್ಲಿ ಮಾತನಾಡಿದರು.<br /> <br /> ‘ನಮ್ಮ ದೇಶಕ್ಕೆ ಹೋಲಿಸಿದರೆ ವಿದೇಶಗಳಲ್ಲಿ ಐತಿಹಾಸಿಕ ಸ್ಮಾರಕಗಳು ಕಡಿಮೆ. ಆದರೆ, ಅವರು ಸಣ್ಣಪುಟ್ಟ ಸ್ಮಾರಕಗಳಿಗೆ ಸಂಬಂಧಿಸಿದಂತೆ ಪ್ರತಿಯೊಂದು ಮಾಹಿತಿಯನ್ನು ದಾಖಲಿಸಿದ್ದಾರೆ’ ಎಂದರು.<br /> <br /> ‘ಅಮೆರಿಕ, ಬ್ರಿಟನ್ನಲ್ಲಿ ಪ್ರತಿಯೊಂದನ್ನು ಸರಿಯಾಗಿ ದಾಖಲಿಸಿದ್ದಾರೆ. ಇದರಿಂದ ಜನರಿಗೆ ಬೇಕಾದ ಮಾಹಿತಿ ಸಿಗುತ್ತದೆ’ ಎಂದು ಹೇಳಿದರು.<br /> ‘ಮುಂದಿನ ತಲೆಮಾರಿಗೆ ನಮ್ಮ ಇತಿಹಾಸದ ಬಗ್ಗೆ ತಿಳಿಸಿಕೊಡಲು ಸ್ಮಾರಕಗಳನ್ನು ಸಂರಕ್ಷಿಸಬೇಕಾಗಿದೆ’ ಎಂದರು.<br /> <br /> ಭಾರತೀಯ ಪುರಾತತ್ವ ಇಲಾಖೆಯ ಅಧೀಕ್ಷಕ ಡಾ. ಟಿ. ಅರುಣ್ ರಾಜ್ ಮಾತನಾಡಿ, ‘ಟಿಪ್ಪು ಶಸ್ತ್ರಾಗಾರವನ್ನು ಇಲಾಖೆಯ ಸುಪರ್ದಿಗೆ ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ಪ್ರಕ್ರಿಯೆ ಮುಂದುವರೆದಿದೆ’ ಎಂದರು.<br /> <br /> ‘ಯುನೆಸ್ಕೊ ಘೋಷಣೆಯಂತೆ ವಿಶ್ವ ಪರಂಪರೆ ದಿನ ಆಚರಿಸಲಾಗುತ್ತಿದೆ. ಸ್ಮಾರಕಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಮತ್ತು ಖಾಸಗಿಯವರ ಬೆಂಬಲ ಬೇಕಾಗಿದೆ’ ಎಂದರು.<br /> <br /> ಇದೇ ವೇಳೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಸ್ಮಾರಕಗಳಿಗೆ ಸಂಬಂಧಿಸಿದ ಮಾಹಿತಿ ಒಳಗೊಂಡ ‘ಕಲಾ ವೈಭವ’ ಕಿರು ಹೊತ್ತಿಗೆ ಹಾಗೂ ‘ಇನ್ಟ್ಯಾಕ್ ಸೋನಾಟ ಆ್ಯಪ್’ ಬಿಡುಗಡೆ ಮಾಡಲಾಯಿತು.<br /> <br /> ಸತ್ಯಪ್ರಕಾಶ್, ಎಸ್ಪಿವಿ ಹಳಕಟ್ಟಿ ಉಪಸ್ಥಿತರಿದ್ದರು. ಡಾ. ಎನ್. ರಾಜಂ ಅವರು ಹಿಂದೂಸ್ತಾನಿ ಹಾಗೂ ಟಿ.ಎಂ. ಕೃಷ್ಣ ಅವರು ಕರ್ನಾಟಕ ಸಂಗೀತ ಕಛೇರಿ ನಡೆಸಿಕೊಟ್ಟರು.<br /> <br /> ಭಾರತೀಯ ಪುರಾತತ್ವ ಇಲಾಖೆ ಮತ್ತು ಇನ್ಟ್ಯಾಕ್ ಬೆಂಗಳೂರು ಜಂಟಿಯಾಗಿ ಕಾರ್ಯಕ್ರಮವನ್ನು ಆಯೋಜಿಸಿದ್ದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>