ಬೆಂಗಳೂರು: ಜನಪ್ರತಿನಿಧಿಗಳೆಂದರೆ ಜನರ ಶ್ರಮದ ಕಂದಾಯವನ್ನು ಕಂಬಳಿಸುವವರು ಎಂಬುದು ಸಾರ್ವತ್ರಿಕ ಆಪಾದನೆ. ಆದರೆ ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ತಮ್ಮ ಸ್ವಂತ ಖರ್ಚಿನಲ್ಲಿ ರಸ್ತೆಗಳಿಗೆ ಡಾಂಬರೀಕರಣ ಮಾಡಿಸುವ ಮೂಲಕ ಮಾದರಿ ಜನಪರ ಕಾಳಜಿ ಮೆರೆದಿದ್ದಾರೆ.
ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆ ಗ್ರಾಮ ಪಂಚಾಯಿತಿ ಸದಸ್ಯ ಕೆಂಪರಾಜು ಅವರೇ ಪಂಚಾಯಿತಿ ವ್ಯಾಪ್ತಿಯ ವಿಶ್ವಶಾಂತಿ ನಗರದ ರಸ್ತೆಗಳಿಗೆ ಡಾಂಬರೀಕರಣ ಮಾಡಲು ಸ್ವಂತದ ₨5 ಲಕ್ಷ ರೂಪಾಯಿ ನೀಡಿದ ದಾನಿ.
ಡಾಂಬರೀಕರಣಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ಎಂ.ಕಾಂತರಾಜು ಅವರು ಮಾತನಾಡಿ, ‘ಜನಪ್ರತಿ
ನಿಧಿಗಳು ಎನಿಸಿಕೊಂಡವರು ದುಂದು ವೆಚ್ಚ ಮಾಡುವ ಬದಲು ಇಂತಹ ಜನೋಪಯೋಗಿ ಕೆಲಸಗಳನ್ನು ಮಾಡಿದರೆ ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗುತ್ತದೆ’ ಎಂದು ಅವರು ಹೇಳಿದರು.