ನವದೆಹಲಿ (ಐಎಎನ್ಎಸ್): ಸ್ವಚ್ಛ ಭಾರತ ಅಭಿಯಾನಕ್ಕೆ ಮಾಧ್ಯಮಗಳು ನೀಡುತ್ತಿರುವ ಸಹಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಮಾಧ್ಯಮ ಪ್ರತಿನಿಧಿಗಳೊಂದಿಗಿನ ಚಹಾ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
’ಸ್ವಚ್ಛ ಭಾರತ ಅಭಿಯಾನ ಕುರಿತ ಹಲವು ಲೇಖನಗಳನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆ ನಡೆದಿರುವುದು ಆರೋಗ್ಯಕಾರಿ’ ಎಂದರು.
ಜನರು ದೇಶಕ್ಕಾಗಿ ಕೆಲಸ ಮಾಡಬೇಕು ಎಂದು ಮಾಧ್ಯಮಗಳು ಸ್ವಾತಂತ್ರ್ಯ ನಂತರದಿಂದಲೂ ಪ್ರೋತ್ಸಾಹಿಸುತ್ತ ಬಂದಿವೆ. ಈಗ ಪರಿಸರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುತ್ತಿರುವುದು ಸಂತೋಷದ ವಿಷಯ ಎಂದರು.