ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾವಲಂಬನ್‌ ಯೋಜನೆ: ಆಹ್ವಾನ

Last Updated 28 ಮೇ 2016, 4:35 IST
ಅಕ್ಷರ ಗಾತ್ರ

ಉಡುಪಿ: ಕೇಂದ್ರ ಸರ್ಕಾರವು ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿಗಾಗಿ 2016–17ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸ್ವಾವಲಂಬನ್‌ ಛಾತ್ರಾವಾಸ್‌ ಯೋಜನೆಯಡಿ ಸಹಾಯಧನ ಮಂಜೂರಾತಿ ಮಾಡುವ ಸಲುವಾಗಿ ಅರ್ಜಿ ಅಹ್ವಾನಿಸಲಾಗಿದೆ.

ಸರ್ಕಾರದ ವಿಶೇಷ ಶಾಲೆಗಳಲ್ಲಿ ವಸತಿ ನಿಲಯಗಳ ನಿರ್ಮಾಣ, ವಿಸ್ತರಣೆ ಅಥವಾ ಅಂಗವಿಕಲ ವಿದ್ಯಾರ್ಥಿಗಳಿಗಾಗಿ ವಿವಿಧ ಶಾಲೆಗಳ ಮಧ್ಯೆ ಅಥವಾ ಹತ್ತಿರದಲ್ಲಿ ಪ್ರತ್ಯೇಕ ವಸತಿ ನಿಲಯ ನಿರ್ಮಾಣ ಹಾಗೂ ವಿಶ್ವವಿದ್ಯಾನಿಲಯದ ಅಂಗವಿಕಲ ವಿದ್ಯಾರ್ಥಿಗಳ ವಸತಿ ನಿಲಯ ನಿರ್ಮಾಣ, ವಿಸ್ತರಣೆಗೆ ಸಹಾಯಧನ ನೀಡಲಾಗುತ್ತದೆ.

ಅರ್ಹ ವಿದ್ಯಾಸಂಸ್ಥೆ–ಸ್ವಯಂ ಸೇವಾ ಸಂಸ್ಥೆಗಳು ಅರ್ಜಿಯನ್ನು ಇದೇ 29ರೊಳಗೆ ಸಲ್ಲಿಸಬೇಕು.  ಅರ್ಜಿ  ಮತ್ತು ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ, ಮಣಿಪಾಲ ಅಥವಾ ದೂರವಾಣಿ 0820–2574 810, 2574 811 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT