ನರೇಗಲ್: ಇಲ್ಲಗೆ ಸಮೀಪದ ಕೋಡಿಕೂಪ್ಪದ ಹಠಯೋಗಿ ವೀರಪ್ಪಜ್ಜನವರ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಬೆಳಿಗ್ಗೆ 7ಕ್ಕೆ ಗದ್ದುಗೆಗೆ ಅಭಿಷೇಕ ಹಾಗೂ ಪೂಜಾ ವಿಧಿವಿಧಾನಗಳು ಜರುಗಿದವು.
ಹಾಲಕೆರೆ ಅನ್ನದಾನೇಶ್ವರ ಮಠದ ಡಾ. ಅಭಿನವ ಅನ್ನದಾನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ನೂತನ ತೆರಿಗೆ ಮಹಾಪೂಜೆ ನೆರವೇರಿಸಲಾಯಿತು.
ಹುಚ್ಚಿರೇಶ್ವರ ರಥೋತ್ಸವವವು ಸಂಭ್ರಮದಿಂದ ನೆರವೇರಿತು.ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ ಭಕ್ತರು ತಮ್ಮ ಭಕ್ತಿಯನ್ನು ಸಮರ್ಪಸಿದರು. ರಥೋತ್ಸವ ಸಾಗಿಬರುವ ದಾರಿಯಲ್ಲಿ ಜಾನಪದ ಮೇಳಗಳಾದ ಭಜನೆ, ಡೂಳ್ಳುವಾಧ್ಯ,ಕಹಳೆ ಸೇರಿದಂತೆ ವಿವಿಧ ವಾದ್ಯಗಳು ಜಾತ್ರೆಯಲ್ಲಿ ಆಕರ್ಷಿಸಿದವು.