‘ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಈ ಘಟನೆ ನಡೆದ ಸ್ಥಳದಲ್ಲಿ ಮೂರು ಟೈಂ ಬಾಂಬ್ಗಳು ಪತ್ತೆಯಾಗಿದ್ದು, ನಕ್ಸಲರ ಕೃತ್ಯ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರಿಗೆ ₨2 ಲಕ್ಷ ಮತ್ತು ಗಂಭೀರವಾಗಿ ಗಾಯಗೊಂಡವರಿಗೆ ₨1 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ವಕ್ತಾರರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
‘ಇದೊಂದು ಯೋಜಿತ ವಿಧ್ವಂಸಕ ಕೃತ್ಯ. ಬೆಳಗಿನ ಜಾವ 2 ಗಂಟೆ ಸುಮಾರಿಗೆ ರೈಲ್ವೆ ಹಳಿಯಲ್ಲಿ ಭಾರಿ ಸ್ಫೊಟದ ಶಬ್ದ ಕೇಳಿಸಿತು, ಅದರ ಬೆನ್ನಿಗೇ ಬೋಗಿಗಳು ಒಂದೊಂದಾಗಿ ಹಳಿ ತಪ್ಪಿದವು’ ಎಂದು ರೈಲ್ವೆ ಮಂಡಳಿಯ ಅಧ್ಯಕ್ಷ ಅರುಣೇಂದ್ರ ಕುಮಾರ್ ಹೇಳಿದ್ದಾರೆ.
ರೈಲ್ವೆ ಸಚಿವ ಸದಾನಂದ ಗೌಡ ಈ ಘಟನೆ ಕುರಿತು ತನಿಖೆಗೆ ಆದೇಶಿಸಿದ್ದಾರೆ.