ನಿಯಮದ ಪ್ರಕಾರ ತಿಂಗಳಿಗೆ ಒಮ್ಮೆಯಾದರೂ ಉನ್ನತ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಸ್ಟೆಲ್ಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಬೇಕು. ಆದರೆ ಈ ಕಾರ್ಯವೂ ನಡೆಯುತ್ತಿಲ್ಲ. ಸ್ಥಳೀಯ ಶಾಸಕರೇ ಸಾಮಾನ್ಯವಾಗಿ ತಾಲ್ಲೂಕು ಕೇಂದ್ರಗಳಲ್ಲಿನ ವಸತಿ ನಿಲಯಗಳ ಅಧ್ಯಕ್ಷರಾಗಿರುತ್ತಾರೆ. ಶಾಸಕರು, ಸಂಸದರು, ಸ್ಥಳೀಯ ಜನಪ್ರತಿನಿಧಿಗಳು ಸೌಜನ್ಯಕ್ಕಾದರೂ ನಿಲಯಗಳಿಗೆ ಭೇಟಿ ನೀಡಿದ್ದರೆ ಈ ದುಃಸ್ಥಿತಿ ಇರುತ್ತಿರಲಿಲ್ಲ. ಮಂಡ್ಯ ಜಿಲ್ಲೆಯಲ್ಲಿ ವಸತಿ ನಿಲಯಗಳಲ್ಲಿ ಹೇಳತೀರದ ಸಮಸ್ಯೆಗಳಿವೆ. ಜನಪ್ರತಿನಿಧಿಗಳು ಈಗಲಾದರೂ ಇತ್ತ ಗಮನಹರಿಸುವರೇ?