ಕಟ್ಟಡದ ಅವಶೇಷಗಳಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡ ತಡರಾತ್ರಿಯವರೆಗೂ ರಕ್ಷಣಾ ಕಾರ್ಯಾಚರಣೆ ನಡೆಸಿತು.
ನಗರದ ನಿವಾಸಿ ಕೈಲಾಸ ರಂಜನ್ (68), ಸಂಡೂರಿನ ಎಂ.ಗಾಳೆಪ್ಪ (39), ಬುಕ್ಕಿಂಗ್ ಕಚೇರಿಯ ವಾಣಿಜ್ಯ ವಿಭಾಗದ ಮುಖ್ಯ ಗುಮಾಸ್ತ ತಿಮ್ಮಾರೆಡ್ಡಿ (50), ಕೂಲಿ ಕಾರ್ಮಿಕ, ನಗರದ ಘಂಟಿಕೇರಿ ನಿವಾಸಿ ಸಲೀಂ ರಫೀಕ್ ಈಟಿ (38), ಪೊಲೀಸ್ ಇನ್ಸ್ಪೆಕ್ಟರ್ ಕಚೇರಿ ರೈಟರ್, ಶಿಗ್ಗಾವಿಯ ಬಾಡ ಗ್ರಾಮದ ಸಿದ್ದಯ್ಯ ಹಿರೇಮಠ (32), ಪೊಲೀಸ್ ಕಚೇರಿ ದ್ವಿತೀಯ ದರ್ಜೆ ಸಹಾಯಕಿ ದಾಕ್ಷಾಯಿಣಿ ಗೌಡರ (35) ಮೃತಪಟ್ಟಿದ್ದಾರೆ.