ಜಮ್ಮು (ಪಿಟಿಐ) : ವೈಷ್ಣೋದೇವಿ ಯಾತ್ರೆಗೆ ಹೊರಟಿದ್ದ ಇಬ್ಬರು ಯಾತ್ರಾರ್ಥಿಗಳಿಗೆ ಮಾರ್ಗ ಮಧ್ಯದಲ್ಲಿ ಹೃದಯಾಘಾತ ಸಂಭವಿಸಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಮಹಾರಾಷ್ಟ್ರ ಮೂಲದ ಉತ್ತಮ್(35), ದೆಹಲಿ ಮೂಲದ ಅನಿಲ್ ಕುಮಾರ್(40) ಎಂದು ಗುರುತಿಸಲಾಗಿದೆ.
ಉತ್ತಮ್ ಅವರು ಮಂಗಳವಾರ ಕಟ್ರಾ ನಗರದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ದೆಹಲಿಯ ಅನಿಲ್ಕುಮಾರ್ ಅವರಿಗೆ ಕಟ್ರಾದ ಶಿಬಿರದ ಹೋಟೆಲ್ ಕೋಣೆಯಲ್ಲಿ ಹೃದಯಘಾತವಾಗಿದೆ.
ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ರಾತ್ರಿ ಮೃತರಾದರು. ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ ಎಂದು ವೈಷ್ಣೋ ದೇವಿ ದೇವಾಲಯ ಸಮಿತಿಯ ಅಧಿಕಾರಿಗಳು ತಿಳಿಸಿದ್ದಾರೆ.