ಈ ಕುರಿತಂತೆ ಸುಬ್ರಮಣಿಯಂ ಅವರು ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ನೇತೃತ್ವದ ನ್ಯಾಯಾಧೀಶರ ನೇಮಕ ಸಮಿತಿಗೆ ಪತ್ರವೊಂದನ್ನು ಬರೆದಿದ್ದಾರೆ ಎಂದು ಸುಬ್ರಮಣಿಯಂ ಅವರ ಕಚೇರಿ ಮೂಲಗಳು ತಿಳಿಸಿವೆ.
ಈ ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಸಾಲಿಸಿಟರ್ ಜನರಲ್ ಆಗಿ ಕಾರ್ಯನಿರ್ವಹಿಸಿದ್ದ ಸುಬ್ರಮಣಿಯಂ ಅವರ ಹೆಸರನ್ನು ನ್ಯಾಯಮೂರ್ತಿ ಹುದ್ದೆಗೆ ಲೋಧಾ ನೇತೃತ್ವದ ನ್ಯಾಯಾಧೀಶರ ನೇಮಕ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ಆದರೆ, ಕೋಲ್ಕತ್ತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರುಣ್ ಮಿಶ್ರಾ, ಒಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೊಯಲ್, ಸುಪ್ರೀಂ ಕೋರ್ಟ್ ಹಿರಿಯ ವಕೀಲ ರೋಹಿಂಟನ್ ನಾರಿಮನ್ ಅವರ ಹೆಸರುಗಳಿಗೆ ಒಪ್ಪಿಗೆ ಸೂಚಿಸಿದ ಸರ್ಕಾರ ಸುಬ್ರಮಣಿಯಂ ಅವರ ಹೆಸರನ್ನು ತಿರಸ್ಕರಿಸಿತ್ತು.