ರಾಮನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2014– -15ನೇ ಸಾಲಿನಲ್ಲಿ 6 ರಿಂದ 15 ವರ್ಷದ ಒಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ‘ಹೋಯ್ಸಳ ಪ್ರಶಸ್ತಿ’ ಹಾಗೂ ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ ಪ್ರಶಸ್ತಿ’ಯ ವಿತರಣೆಗಾಗಿ ಅರ್ಹ ಬಾಲಕ ಮತ್ತು ಬಾಲಕಿಯರಿಂದ ಅರ್ಜಿ ಆಹ್ವಾನಿಸಿದೆ.
6 ರಿಂದ 15 ವರ್ಷ ವಯಸ್ಸಿಗಿಂತ ಕಡಿಮೆ ಮಯೋಮಿತಿ ಹೊಂದಿರಬೇಕು. (ಸಾಧನೆ ಮಾಡಿದ ಪ್ರಕರಣವು ಆಗಸ್ಟ್ 2013 ರಿಂದ ಜುಲೈ 2014 ರ ಒಳಗೆ ನಡೆದಿರಬೇಕು).ಈ ಸಾಧನೆಯು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು. ಧೈರ್ಯ ಶೌರ್ಯವನ್ನು ಪ್ರದರ್ಶಿಸಿದ ಬಗ್ಗೆ ದಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯಿತಿ, ಶಾಲಾ ಶಿಕ್ಷಕರು ಸಾಧನೆಯನ್ನು ಗುರುತಿಸಿ ಜಿಲ್ಲಾ ಮಟ್ಟಕ್ಕೆ ತಿಳಿಸಿರಬೇಕು.
ಲಗತ್ತಿಸಬೇಕಾದ ದಾಖಲೆಗಳು: ಅಭ್ಯರ್ಥಿಯು 2 ಭಾವಚಿತ್ರ, ಶೌರ್ಯ ಸಾಧನೆ ತೋರಿದ ಬಗ್ಗೆ ಪೊಲೀಸ್ ಇಲಾಖೆಯ ಪ್ರಾಥಮಿಕ ತನಿಖಾ ವರದಿ (ಎಫ್ಐಆರ್), ಜನ್ಮದಿನಾಂಕದ ಬಗ್ಗೆ ಮಹಾನಗರ ಪಾಲಿಕೆ, ಗ್ರಾಮ ಲೆಕ್ಕಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಅಥವಾ ಶಾಲೆಯಿಂದ ಪಡೆದ ವರ್ಗಾವಣೆ ಪತ್ರ, ಧೈರ್ಯ, ಶೌರ್ಯ ತೋರಿದ ಬಗ್ಗೆ ಪತ್ರಿಕಾ ಪ್ರಕಟಣೆಗಳು.
ಅರ್ಜಿ ಹಾಗೂ ನಿಗದಿತ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಅಕ್ಟೋಬರ್ 15ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080– -27273036 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.