ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಕೋಟೆ ತಿಗಳರ ಸಂಘಕ್ಕೆ ಕಚೇರಿ

Last Updated 27 ಏಪ್ರಿಲ್ 2015, 20:09 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನಲ್ಲಿ  ಸ್ಥಾಪಿಸಿರುವ ಪ್ರಗತಿಪರ ತಿಗಳರ ಸಂಘದ ಬೆಳವಣಿಗೆಗೆ ಸಮುದಾಯದವರು ಸಹಕರಿಸಬೇಕು ಎಂದು ಸಂಘದ ಅಧ್ಯಕ್ಷ ಎಚ್.ಎನ್.ಅರುಣ್‌ ಕುಮಾರ್ ಮನವಿ ಮಾಡಿದರು.

ಪಟ್ಟಣದ ಮೇಲಿನಪೇಟೆಯಲ್ಲಿರುವ ಧರ್ಮರಾಯಸ್ವಾಮಿ ದೇವಾಲಯದ ಮುಂಭಾಗ ಸಂಘದ ಕಚೇರಿ ಉದ್ಘಾಟಿಸಿ ಮಾತನಾಡಿದರು. ಜನಾಂಗದವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಬಲಿಷ್ಠವಾದ ಸಂಘಟನೆ ಅಗತ್ಯವಾಗಿದೆ.  ಜಾಗೃತಿ ಮೂಡಿಸುವ, ಜನಾಂಗದವರ ಕುಂದು ಕೊರತೆಗಳನ್ನು ನಿವಾರಿಸುವ ಸಲುವಾಗಿ ಸಂಘವನ್ನು ಸ್ಥಾಪಿಸಲಾಗಿದೆ. 

ಸಂಘಕ್ಕೆ  ಜಾಗ ಮಂಜೂರು ಮಾಡುವಂತೆ ವಿನಂತಿಸಿ ಅರ್ಜಿ ಸಲ್ಲಿಸಲಾಗಿದೆ ಎಂದರು. ಸಂಘದ ಕಾರ್ಯಾಧ್ಯಕ್ಷ ಎಸ್.ನಾಗರಾಜ್, ಉಪಾಧ್ಯಕ್ಷರಾದ ಎಚ್.ಎಂ.ನಾಗರಾಜ್, ಚಿನ್ನಣ್ಣ, ಪ್ರಧಾನ ಕಾರ್ಯದರ್ಶಿ ಬಾಲಚಂದ್ರನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT