ಮುಂಬೈ (ಪಿಟಿಐ): ಮಹಾರಾಷ್ಟ್ರವು ಶಿಕ್ಷಣ ಮತ್ತು ಅಭಿವೃದ್ಧಿಯಲ್ಲಿ ಗುಜರಾತ್ಗಿಂತ ಮುಂದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಬಗ್ಗೆ ಏನನ್ನೇ ಮಾತನಾಡಿದರೂ ಅದಕ್ಕೆ ಮುನ್ನ ಸೂಕ್ತ ಅವಲೋಕನ ಮಾಡಿಕೊಳ್ಳಲಿ ಎಂದು ಕಾಂಗ್ರೆಸ್ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಆನಂದ ಶರ್ಮ ಹೇಳಿದ್ದಾರೆ.
ಗುಜರಾತ್ಗಿಂತ ಮಹಾರಾಷ್ಟ್ರ ಮುಂದಿರಬೇಕು ಎಂಬುದು ತಮ್ಮ ಬಯಕೆ ಎಂದು ಮೋದಿ ಅವರು ಶನಿವಾರದ ಸಭೆಯಲ್ಲಿ ಹೇಳಿದ್ದಾರೆ. ಆದರೆ 2000ನೇ ಇಸವಿಯಿಂದ 2013ನೇ ಇಸವಿಯವರೆಗಿನ ಅಂಕಿಅಂಶಗಳನ್ನು ನೋಡಿದರೆ ಮಹಾರಾಷ್ಟ್ರ ಅಭಿವೃದ್ಧಿಯಲ್ಲಿ ಗುಜರಾತ್ಗಿಂತ ಮುಂದಿರುವುದು ಗೊತ್ತಾಗುತ್ತದೆ. ಈ ಅವಧಿಯಲ್ಲಿ ಮಹಾರಾಷ್ಟ್ರಕ್ಕೆ ಅತ್ಯಧಿಕ ವಿದೇಶಿ ಹೂಡಿಕೆ ಹರಿದುಬಂದಿದ್ದರೆ ಗುಜರಾತ್ ಐದನೇ ಸ್ಥಾನದಲ್ಲಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.
ಮೋದಿ ಅವರಿಗೆ ಮಹಾರಾಷ್ಟ್ರದ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಜನಬೆಂಬಲ ವ್ಯಕ್ತವಾಗುವ ಬಗ್ಗೆ ಅನುಮಾನಗಳಿವೆ. ಅದಕ್ಕಾಗಿಯೇ 20 ಚುನಾವಣಾ ರ್್ಯಾಲಿಗಳನ್ನು ಹಮ್ಮಿಕೊಂಡಿದ್ದಾರೆ ಎಂದು ಟೀಕಿಸಿದರು. ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ರಕ್ಷಣಾ ಖಾತೆಗೆ ಪ್ರತ್ಯೇಕ ಸಚಿವರಿಲ್ಲ. ಹಣಕಾಸು ಸಚಿವರಿಗೇ ರಕ್ಷಣಾ ಖಾತೆಯನ್ನೂ ಹೆಚ್ಚುವರಿಯಾಗಿ ವಹಿಸಲಾಗಿದ್ದು ಅವರೂ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದರು.