ಬೆಂಗಳೂರು: ವಿವಾದಕ್ಕೆ ಗುರಿಯಾಗಿದ್ದ ‘ಇಟ್ಟ ಗುರಿ ದಿಟ್ಟ ಹೆಜ್ಜೆ’ ಪುಸ್ತಕ ಖರೀದಿ ಕುರಿತು ಹೊರಡಿಸಿದ್ದ ಆದೇಶವನ್ನು ಹಿಂದಕ್ಕೆ ಪಡೆದಿದೆ. ಈ ಪುಸ್ತಕವನ್ನು ರಾಜ್ಯದ ಸರ್ಕಾರಿ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಲಭ್ಯ ಇರುವ ಅನುದಾನದಲ್ಲಿ ಖರೀದಿಸಲು ಅನುಮತಿ ನೀಡಿ ಎಂದು ಆದೇಶ ಹೊರಡಿಸಲಾಗಿತ್ತು.
ರಾಜ್ಯದ ಎಲ್ಲ ಜಿಲ್ಲಾ ಉಪ ನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳಿಗೆ ಪುಸ್ತಕ ಖರೀದಿಸದಿರುವಂತೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.