ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎತ್ತಿನಹೊಳೆ ಕೈಬಿಟ್ಟಿಲ್ಲ’

Last Updated 16 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ ಯೋಜನೆಯನ್ನು ಸ್ಥಗಿತಗೊಳಿಸಿಲ್ಲ. ಐದು ಪ್ಯಾಕೇಜ್‌ಗಳಲ್ಲಿ ಟೆಂಡರ್‌ ಪ್ರಕ್ರಿಯೆ ಮುಗಿದಿದ್ದು, ಶೀಘ್ರದಲ್ಲಿ ಕಾಮಗಾರಿ ಆರಂಭವಾಗಲಿದೆ’ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.

ಬಯಲುಸೀಮೆ ಶಾಸಕರ ಆಕ್ಷೇಪಕ್ಕೆ ಪ್ರತಿಕ್ರಿಯಿಸಿದ ಅವರು ₹12,912 ಕೋಟಿ ವೆಚ್ಚದ ಯೋಜನೆಗೆ 2014ರ ಫೆಬ್ರುವರಿ 17ರಂದು ಅನುಮೋದನೆ ನೀಡಲಾಗಿತ್ತು. ಈಗ ಐದು ಕಂಪೆನಿಗಳಿಗೆ ಗುತ್ತಿಗೆ ನೀಡಿದ್ದು, ಮೊದಲನೆ ಹಂತಕ್ಕೆ₹ 2,670 ಕೋಟಿ ನಿಗದಿ ಮಾಡಲಾಗಿದೆ. ಯಾವ ಸಂದರ್ಭದಲ್ಲೂ ಯೋಜನೆ ಕೈಬಿಡಲಾಗಿದೆ ಎಂಬ ಮಾತು ಹೇಳಬೇಡಿ’ ಎಂದು ಅವರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT