<p><strong>ಬಾಗಲಕೋಟೆ: </strong>ಅಸಹಿಷ್ಣುತೆಯನ್ನು ಪ್ರತಿಯೊಬ್ಬರು ಖಂಡಿಸಬೇಕು, ಅದು ಯಾರಿಂದಲೇ ನಡೆದಿದ್ದರೂ ಖಂಡಿಸುವ ಜಾತ್ಯತೀತ ಮನೋಭಾವ ಬೇಕು. ಕೇವಲ ಹಿಂದೂಗಳ ಅಸಹಿಷ್ಣುತೆ ವಾದವನ್ನು ಖಂಡಿಸುವ ಬುದ್ಧಿಜೀವಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.<br /> <br /> ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅಸಹಿಷ್ಣುತೆ ಹಿಂದೂಗಳಿಂದ ಆಗಿರಲಿ ಅಥವಾ ಮುಸ್ಲಿಮರಿಂದಲೇ ಆಗಿರಲಿ. ಅದನ್ನು ಎಲ್ಲರೂ ಖಂಡಿಸಬೇಕು ಎಂದರು.<br /> <br /> ‘ಬ್ರಾಹ್ಮಣರು ದೇಶ ಬಿಟ್ಟು ಹೋಗಬೇಕು’ ಎಂಬ ಸಾಹಿತಿ ಪ್ರೊ. ಚಂಪಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಅವರ ಮಾತಿನಲ್ಲಿ ಗಂಭೀರತೆಗಿಂತ ಹೆಚ್ಚಾಗಿ ಹಾಸ್ಯವೇ ಇರುತ್ತದೆ’ ಎಂದು ವ್ಯಂಗ್ಯವಾಡಿದರು.<br /> <br /> ಬ್ರಾಹ್ಮಣರಿಂದ ಅಸ್ಪೃಶ್ಯತೆ ಆಚರಣೆ ನಡೆದಿಲ್ಲ. ಆದಿ ದ್ರಾವಿಡರನ್ನು ಸೋಲಿಸಿ ಬಂದ ದ್ರಾವಿಡರು ಅಸ್ಪೃಶ್ಯತೆಯನ್ನು ಆರಂಭಿಸಿದರು. ಆಧುನಿಕ ಸಂಶೋಧನೆಗಳು ಇದಕ್ಕೆ ದಾಖಲೆಗಳನ್ನು ಒದಗಿಸುತ್ತವೆ ಎಂದು ಹೇಳಿದರು.<br /> <br /> ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು, ದೇಶದಲ್ಲಿ ಗೋಹತ್ಯೆ ನಿರ್ಬಂಧಿಸಬೇಕು, ಇದು ಪಕ್ಷಾತೀತವಾಗಿ ನಡೆಯಬೇಕಾಗಿರುವ ನೈತಿಕ ಕೆಲಸ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೇ ಅನೇಕ ರಾಜ್ಯಗಳಲ್ಲಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಗೋಹತ್ಯೆ ನಿಷೇಧ ರಾಷ್ಟ್ರೀಯ ನೀತಿಯಾಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ: </strong>ಅಸಹಿಷ್ಣುತೆಯನ್ನು ಪ್ರತಿಯೊಬ್ಬರು ಖಂಡಿಸಬೇಕು, ಅದು ಯಾರಿಂದಲೇ ನಡೆದಿದ್ದರೂ ಖಂಡಿಸುವ ಜಾತ್ಯತೀತ ಮನೋಭಾವ ಬೇಕು. ಕೇವಲ ಹಿಂದೂಗಳ ಅಸಹಿಷ್ಣುತೆ ವಾದವನ್ನು ಖಂಡಿಸುವ ಬುದ್ಧಿಜೀವಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.<br /> <br /> ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅಸಹಿಷ್ಣುತೆ ಹಿಂದೂಗಳಿಂದ ಆಗಿರಲಿ ಅಥವಾ ಮುಸ್ಲಿಮರಿಂದಲೇ ಆಗಿರಲಿ. ಅದನ್ನು ಎಲ್ಲರೂ ಖಂಡಿಸಬೇಕು ಎಂದರು.<br /> <br /> ‘ಬ್ರಾಹ್ಮಣರು ದೇಶ ಬಿಟ್ಟು ಹೋಗಬೇಕು’ ಎಂಬ ಸಾಹಿತಿ ಪ್ರೊ. ಚಂಪಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ. ಅವರ ಮಾತಿನಲ್ಲಿ ಗಂಭೀರತೆಗಿಂತ ಹೆಚ್ಚಾಗಿ ಹಾಸ್ಯವೇ ಇರುತ್ತದೆ’ ಎಂದು ವ್ಯಂಗ್ಯವಾಡಿದರು.<br /> <br /> ಬ್ರಾಹ್ಮಣರಿಂದ ಅಸ್ಪೃಶ್ಯತೆ ಆಚರಣೆ ನಡೆದಿಲ್ಲ. ಆದಿ ದ್ರಾವಿಡರನ್ನು ಸೋಲಿಸಿ ಬಂದ ದ್ರಾವಿಡರು ಅಸ್ಪೃಶ್ಯತೆಯನ್ನು ಆರಂಭಿಸಿದರು. ಆಧುನಿಕ ಸಂಶೋಧನೆಗಳು ಇದಕ್ಕೆ ದಾಖಲೆಗಳನ್ನು ಒದಗಿಸುತ್ತವೆ ಎಂದು ಹೇಳಿದರು.<br /> <br /> ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಬೇಕು, ದೇಶದಲ್ಲಿ ಗೋಹತ್ಯೆ ನಿರ್ಬಂಧಿಸಬೇಕು, ಇದು ಪಕ್ಷಾತೀತವಾಗಿ ನಡೆಯಬೇಕಾಗಿರುವ ನೈತಿಕ ಕೆಲಸ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗಲೇ ಅನೇಕ ರಾಜ್ಯಗಳಲ್ಲಿ ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಗೋಹತ್ಯೆ ನಿಷೇಧ ರಾಷ್ಟ್ರೀಯ ನೀತಿಯಾಗಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>