ವಿವಿಧ ರಾಜ್ಯಗಳಲ್ಲಿ ಕಾಡಾ ಮತ್ತು ವಾಲ್ಮಿ ಕಾರ್ಯನಿರ್ವಹಣೆ ಕುರಿತು ಅಧ್ಯಯನ ನಡೆಸಲು ಇಲಾಖೆಯ ಹಿರಿಯ ಅಧಿಕಾರಿಗಳ ಎರಡು ತಂಡಗಳನ್ನು ರಚಿಸಲಾಗಿತ್ತು. ಈ ತಂಡದ ಸದಸ್ಯರು ಗುಜರಾತ್, ರಾಜಸ್ತಾನ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ತೆರಳಿ ಅಧ್ಯಯನ ನಡೆಸಿದ್ದರು. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಸಿದ್ದರಾಮಯ್ಯ ಅವರಿಗೆ ಈ ಕುರಿತ ವರದಿಯನ್ನು ಸಲ್ಲಿಸಲಾಯಿತು.
ವರದಿ ಸ್ವೀಕರಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ, ‘ಅಧ್ಯಯನ ತಂಡಗಳು ಸಲ್ಲಿಸಿರುವ ವರದಿಯಲ್ಲಿ 40 ಶಿಫಾರಸುಗಳಿವೆ. ಈ ಶಿಫಾರಸುಗಳನ್ನು ಆಧರಿಸಿ ಕ್ರಿಯಾಯೋಜನೆ ರೂಪಿಸಲಾಗುವುದು’ ಎಂದರು.