ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೊಡುಗೆ’

Last Updated 4 ಸೆಪ್ಟೆಂಬರ್ 2015, 19:41 IST
ಅಕ್ಷರ ಗಾತ್ರ

ಶಿಕ್ಷಕರ ದಿನಾಚರಣೆಗೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯ ಕೊಡುಗೆ- ಹೊಟ್ಟೆಗೆ ತಣ್ಣೀರು ಬಟ್ಟೆ! ನಾಡೆಲ್ಲಾ ಸಂಭ್ರಮದಿಂದ ಶಿಕ್ಷಕರ ದಿನಾಚರಣೆ ಆಚರಿಸುತ್ತಿರುವಾಗ ಕೋಲಾರದ ಮಹಿಳಾ ಸಮಾಜದ ಕನ್ನಡ ಮಾಧ್ಯಮ ಶಾಲೆಯ ಅಧ್ಯಾಪಕರಿಗೆ ಕೋಲಾರದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಳೆದ ಮೂರು ತಿಂಗಳಿನಿಂದ  ಸಂಬಳವನ್ನೇ ಬಿಡುಗಡೆ ಮಾಡದೆ ಸತಾಯಿಸುತ್ತಿದ್ದಾರೆ. ನಲವತ್ತು ವರ್ಷಗಳ ಹಿಂದಿನಿಂದ ನಡೆಯುತ್ತಿರುವ ಶಾಶ್ವತ ಅನುದಾನದ ಈ ಕನ್ನಡ ಮಾಧ್ಯಮ ಶಾಲೆಗೆ ಈ ವರ್ಷದ ನವೀಕರಣದ ನೆಪವೊಡ್ಡಿ, ಹಲವಾರು ಬಾರಿ ಪತ್ರ ಬರೆದಿದ್ದರೂ ಯಾವ ಉತ್ತರವನ್ನೂ ನೀಡದೆ ಮೂರು ತಿಂಗಳಿನಿಂದ ಅಧ್ಯಾಪಕರಿಗೆ ಸಂಬಳವನ್ನು ಬಿಡುಗಡೆ ಮಾಡದೆ ತೊಂದರೆ ನೀಡುತ್ತಿದ್ದಾರೆ. ಇದೇ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ರೀತಿ ಇದೇ ವರ್ಷದ ಏಪ್ರಿಲ್‌ನಲ್ಲಿಯೂ ಕನ್ನಡ ಮಾಧ್ಯಮ ಶಾಲೆಯ ಅಧ್ಯಾಪಕರಿಗೆ ವಿನಾಕಾರಣ ಮೂರು ತಿಂಗಳು ಸಂಬಳ  ತಡೆಹಿಡಿದಿದ್ದರು. ಆಗ ಇಲಾಖೆಯ ಮೇಲಧಿಕಾರಿಗಳಿಗೆ ದೂರು ನೀಡಿದ ನಂತರ ಸಂಬಳ ಬಿಡುಗಡೆ ಮಾಡಿದ್ದರು. ಪ್ರಾಥಮಿಕ ಶಿಕ್ಷಣ ಸಚಿವರು ಇತ್ತ ಗಮನ ಹರಿಸಿ ಕನ್ನಡ ಮಾಧ್ಯಮದ ಅಧ್ಯಾಪಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT